Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ 

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು 66/11 ಕೆ.ವಿ ಹರಿಯಬ್ಬೆ ಉಪ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ವರೆಗೆ ಹಾಲಿ ಇರುವ 9.628 ಕಿ.ಮೀ ಉದ್ದದ 66 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು, ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.

ಈ 66 ವಿದ್ಯುತ್ ಮಾರ್ಗವನ್ನು ಜುಲೈ 20ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಪ್ರದೇಶಗಳು: ಮ್ಯಾಕ್ಯೂರಹಳ್ಳಿ, ಬಬ್ಬೂರು, ಹೇಮದಳ, ಅಂಬಲಗೆರೆ, ಬಿದರಕೆರೆ, ಹರಿಯಬ್ಬೆ, ಶಿಡ್ಲಯ್ಯನಕೋಟೆ, ಕ್ಯಾತನಮಳೆ, ಗೊಲ್ಲರಹಟ್ಟಿ ಗೂಳ್ಯ, ರಂಗೇನಹಳ್ಳಿ ಮತ್ತು ಚಂದ್ರಗಿರಿ ಗೊಲ್ಲಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ