Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್ 26 ಸಂವಿಧಾನ ದಿನಾಚರಣೆ; ಜಾಗೃತಿ ಜಾಥಾ

 
===
ರಾಯಚೂರು ನವೆಂಬರ್ 25  ಭಾರತ ದೇಶದಾದ್ಯಂತ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಅದೆ ರೀತಿ ಕರ್ನಾಟಕ ರಾಜ್ಯದಲ್ಲಿಯು ಸಹ ಸಂವಿಧಾನ ದಿನಾಚರಣೆಯು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಲಾಗುತ್ತದೆ.
ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾಥಾವು ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮಹಾನಗರ ಪಾಲಿಕೆ ಆವರಣದಿಂದ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿ ಮಹಾತ್ಮಗಾಂಧಿ ವೃತ್ತ, ಮಹಾವೀರ ವೃತ್ತ, ತೀನ್ ಖಂದೀಲ್, ಎಕ್ ಮೀನಾರ್, ತಹಸೀಲ್ ಕಚೇರಿ, ಬಸ್ ನಿಲ್ದಾಣ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಂಚರಿಸಿ ಶ್ರೀ ಪಂಡಿತ ಸಿದ್ದರಾಮ ಜಂಬಲ್‌ದಿನ್ನಿ ರಂಗಮAದಿರವರೆಗೆ ಸಾಗಿ ಮುಕ್ತಾಯವಾಗಲಿದೆ.
ಜಾಥಾದಲ್ಲಿ ಸಂವಿಧಾನದ ಜಾಗೃತಿಯ ಪ್ಲೇ ಕಾರ್ಡ ಹಿಡಿದು, ಸಂವಿಧಾನ ಪುಸ್ತಕ, ರಾಷ್ಟçದ್ವಜ ಹಾಗೂ ಡಾ. ಬಿ.ಆರ್.ಅಂಬೇಡ್ಕರ ಅವರ ವೇಶ ಹಾಕಿದ ಯುವಕರಿಂದ ಜಾಥಾ ಆಯೋಜಿಸಲಾಗಿದೆ. ಆದಕಾರಣ ಎಲ್ಲ ನಾಗರಿಕರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಮುಖಂಡರು ಹಾಗೂ ಸದಸ್ಯರು ಸೇರಿದಂತೆ ಎಲ್ಲರು ಸಂವಿಧಾನ ದಿನಾಚರಣೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ಸಂವಿಧಾನ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ