Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಒಂದು ದಿನದ ಕಾರ್ಯಾಗಾರ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಶಸ್ತ್ಯ:ಡಾ.ಗೊಳ್ಳೆ ಶಿವಶರಣ.ಬಿ

 

ಬಳ್ಳಾರಿ,ಮಾ.04
ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಕಲಬುರಗಿಯ ಕಾಲೇಜು ಶಿಕ್ಷಣ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಗೊಳ್ಳೆ ಶಿವಶರಣ.ಬಿ ಅವರು ಹೇಳಿದರು.
ಮಂಗಳವಾರ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ಸಹಯೋಗದೊಂದಿಗೆ ‘ಕಲಿಕೆ ಜೊತೆಗೆ ಕೌಶಲ್ಯ 2.0’ ಯೋಜನೆ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರ ವೇಗವಾಗಿ ಬದಲಾಗುತ್ತಿರುವುದರಿಂದ ಉದ್ಯೋಗ ಸಂಬAಧಿತ ಕೌಶಲ್ಯಗಳು ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯ ವಂಚಿತರ ಪ್ರಮಾಣ ಶೇ.60 ರಷ್ಟು ಇದೆ. ಬಹುಮುಖ ಪ್ರತಿಭೆಗಳು ಮಾತ್ರ ಉದ್ಯೋಗಕ್ಕೆ ಆರ್ಹರಾಗಿದ್ದಾರೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೌಶಲ್ಯಗÀಳನ್ನು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಕರ್ನಾಟಕ ಕೌಶಲ್ಯ ಅಭವೃದ್ಧಿಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ರಾಗಪ್ರಿಯ.ಆರ್ ಅವರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೌಶಲ್ಯ ಆಧಾರಿತ ಶಿಕ್ಷಣ ಮಹತ್ವಪೂರ್ಣವಾಗಿದೆ. ಈಗಾಗಲೇ ಕೌಶಲ್ಯಾಧಾರಿತ ಶಿಕ್ಷಣವನ್ನು ಹಲವಾರು ವಿದ್ಯಾರ್ಥಿಗಳು ಪಡೆದು ಒಳ್ಳೆಯ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ವಿಡಿಯೋ ಸಂವಾದದ ಮೂಲಕ ಕಾಲೇಜು ಶಿಕ್ಷಣ ಬೆಂಗಳೂರು ನಿರ್ದೇಶಕರಾದ ಪ್ರೊ.ಶೋಭಾ.ಜಿ ಅವರು ಮಾತನಾಡಿ, ಶಿಕ್ಷಣ ರಂಗದಲ್ಲಿ ಪದವಿ ಜೊತೆಗೆ ಜ್ಙಾನಾಧಾರಿತ ಕೌಶಲ್ಯಗಳು ಅವಶ್ಯವಾಗಿವೆ. ಈ ನಿಟ್ಟಿನಲ್ಲಿ ಈಗಾಗಲೇ ನಾಲ್ಕು ವಿಶ್ವವಿದ್ಯಾಲಯಗಳ 28 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೌಶಲ್ಯವೃದ್ಧಿ ಪಡೆಸಿಕೊಂಡಿದ್ದಾರೆ ಎಂದರು.
ವಿಶ್ವವಿದ್ಯಾಯದ ಮೌಲ್ಯಮಾಪನ ಕುಲಸಚಿವರಾದ ಡಾ. ಎನ್.ಎಂ.ಸಾಲಿ ಅವರು ಮಾತನಾಡಿ, ವಿಶ್ವವಿದ್ಯಾಲಯಗಳು ಸಾಂಪ್ರಾದಾಯಕದಿAದ ವೈಜ್ಞಾನಿಕತೆಯಡೆಗೆ ಸಾಗಬೇಕಾಗಿದೆ. ಶಿಕ್ಷಣದಲ್ಲಿ ಹಲವಾರು ಕೌಶಲ್ಯಗಳಿಂದ ಜಗತ್ತು ಮುಂದುವರೆಯುತ್ತಿದೆ. ನಾವು ಅದರೊಂದಿಗೆ ಸಾಗಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒಲವು ಹೊಂದಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಸ್ಪೂರ್ತಿ ಪಡೆದು, ಕೌಶಲ್ಯಗಳ ಕೊರತೆಯನ್ನು ಹೋಗಲಾಡಿಸಬೇಕು. ಕೌಶಲ್ಯ ಆಧಾರಿತ ಶಿಕ್ಷಣದಿಂದ ವಿಶ್ವಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ನಾವೆಲ್ಲರು ಶ್ರಮವಹಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಗ ಪ್ರೀಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಎಸ್.ಎನ್.ರುದ್ರೇಶ್, ಕಾರ್ಯಕ್ರಮ ಸಂಯೋಜಕರಾದ ಡಾ.ನಿರ್ಮಲ.ಜೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮವನ್ನು ಡಾ.ಬಿ ಸರೋಜಾ ನಿರೂಪಿಸಿದರು.
ಈ ವೇಳೆ ವಿವಿಯ ಅಧೀನದ ವಿವಿಧ ಕಾಲೇಜು ಪ್ರಾಂಶುಪಾಲರು ಹಾಗು ಸಿಬ್ಬಂದಿಗಳು, ವಿವಿಯ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಹಾಜರಿದ್ದರು.
----------
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು