Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ" "ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ"



ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.



ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.



◆ ಡಿಜಿಟಲ್‌ ಸೇವೆ:-

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.

ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.



ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ