Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಜಿ ಸಿಇಟಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ, ಆಗಸ್ಟ್ 01 , 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತ ಕಚೇರಿಯ ಕಚೇರಿ ಸಹಾಯಕರಾದ ಪ್ರದೀಪ್ ನಿಕ್ಕಂ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆ.01 ರಂದು ಏರ್ಪಡಿಸಲಾಗಿದ್ದ 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ ವ್ಯವಸ್ಥೆ, ಮೂಲಭೂತ ಸೌಕರ್ಯಗಳು ಸೇರಿದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಆ.04 ರಂದು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಗಿನ ಅಧಿವೇಶನದಲ್ಲಿ ಎಂಸಿಎ ಮತ್ತು ಮಧ್ಯಾಹ್ನದ ಅಧಿವೇಶನದಲ್ಲಿ ಎಂಬಿಎ ಗೆ ಪಿಜಿಸಿಇಟಿ ಪರೀಕ್ಷೆಗಳು ನಡೆಯಲಿವೆ.

ಎಂಸಿಎ ಗೆ 1286 ಮತ್ತು ಎಂಬಿಎ ಗೆ 2421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಿ ಈಗಾಗಲೇ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-23 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ವಾಹನಕ್ಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೂರು ಜನ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಹಾಗೂ ಪ್ರತಿ ಕೇಂದ್ರಕ್ಕೆ ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಜಾಗೃತ ದಳದ ಸಿಬ್ಬಂದಿಗಳು ಮತ್ತು ಅಗತ್ಯವಿರುವ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.

ಪರೀಕ್ಷೆಗಳನ್ನು ಶಾಂತಯುತವಾಗಿ ನಡೆಸಲು ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಓರ್ವ ಮಹಿಳಾ ಮತ್ತು ಓರ್ವ ಪುರಷ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತರಲು ಪ್ರತಿ ಮಾರ್ಗಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆಗೆ ಕೋರಲಾಗಿದೆ ಎಂದರು.

ಡಿಡಿಪಿಯು ಚಂದ್ರಪ್ಪ ಗುಂಡೆಪಲ್ಲಿ ಮಾತನಾಡಿ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದ್ದು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಪರೀಕ್ಷೆಗಳು ನಡೆಯಲು ಅವಶ್ಯಕವಾದ ಸಕಲ ಸಿದ್ದತಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುನಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ