Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟಬಂರ್ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ


ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.



ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆ್ಯಪ್ ಸಿದ್ಧಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು