Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಿಚಿತ ವ್ಯಕ್ತಿಯ ಶವ ಪತ್ತೆ - ಗುರುತು ಪತ್ತೆಗೆ ಪೊಲೀಸರ ಮನವಿ


ಬಳ್ಳಾರಿ,ಏ.27

ಬಳ್ಳಾರಿ ತಾಲ್ಲೂಕಿನ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ವಾರಸುದಾರರ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ.

ಘಟನೆಯ ವಿವರ:

ಏ.21 ರಂದು ಸಂಜೆ ಸುಮಾರು 4:30 ಗಂಟೆಯ ವೇಳೆಗೆ, ಶಿವಪುರ ಗ್ರಾಮದ ಹತ್ತಿರವಿರುವ ಎಸ್‌ಹೆಚ್ 132 ಬಳ್ಳಾರಿ-ಆಲೂರು ರಸ್ತೆಯ ಎಲ್‌ಎಲ್‌ಸಿ ಕಾಲುವೆಯ ಸೇತುವೆ ಪಕ್ಕದಲ್ಲಿ ಈ ಶವ ತೇಲುತ್ತಿರುವುದು ಕಂಡುಬoದಿದೆ. ಮೃತದೇಹವು ನೀರಿನಲ್ಲಿ ಬೋರಲಾಗಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯಕ್ತಿಯು ಆಕಸ್ಮಿಕವಾಗಿ ಕಾಲುವೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮೃತನ ಚಹರೆ ಮಾಹಿತಿ:

ವಯಸ್ಸು ಅಂದಾಜು 30 ರಿಂದ 35 ವರ್ಷ, ಎತ್ತರ ಸುಮಾರು 5.5 ಅಡಿ, ಸದೃಢ ಮೈಕಟ್ಟು, ತಿಳಿ-ಬಿಳಿ ಬಣ್ಣದ ದಪ್ಪ ಗೆರೆಗಳುಳ್ಳ ಪೂರ್ಣ ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ.

ಮೃತನ ಮೂಗು, ತುಟಿ ಹಾಗೂ ಎರಡು ಕಾಲುಗಳ ಚರ್ಮವನ್ನು ಜಲಚರ ಪ್ರಾಣಿಗಳು ತಿಂದಿರುವ ಗುರುತುಗಳಿವೆ. ಇನ್ನುಳಿದಂತೆ ದೇಹದ ಮೇಲೆ ಯಾವುದೇ ಗುರುತುಗಳು ಮೇಲ್ನೋಟಕ್ಕೆ ಕಂಡುಬ0ದಿಲ್ಲ.

ಮೃತನ ಹೆಸರು ಅಥವಾ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರು-08392-258100, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರು-ಮೊ.9480803021, ಪಿ.ಡಿ ಹಳ್ಳಿ ವೃತ್ತದ ವೃತ್ತ ನಿರೀಕ್ಷಕರು-ಮೊ.9480803031, ಮೋಕಾ ಪೊಲೀಸ್ ಠಾಣೆ-0892293228, 9480803050 ಗೆ ಸಂಪರ್ಕಿಸಬಹುದಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ