Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ), ಜು.02(ಕರ್ನಾಟಕ ವಾರ್ತೆ) : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಅವಾಸ್ (ನಗರ) 2.0 ಯೋಜನೆಯನ್ನು ‘ಸರ್ವರಿಗೂ ಸೂರು’ ಒದಗಿಸಲು ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯ ಬಡವರು ಕೊಳಚೆ ನಿವಾಸಿಗಳನ್ನು ಒಳಗೊಂಡAತೆ ಮಧ್ಯಮ ವರ್ಗದವರಿಗೆ ಸಹಾಯಧನ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ನಗರದ ಸ್ಥಳೀಯ ನಿವಾಸಿಗಳಾದ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರು, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು  https://pmay-urban.gov.in  ವೆಬ್‌ಸೈಟ್ ನಲ್ಲಿ ಸ್ವತಃ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ಜುಲೈ.15 ರೊಳಗಾಗಿ ಸಲ್ಲಿಸಿದ ದಾಖಲಾತಿಗಳನ್ನು ಆಯಾ ನಗರದ ಸಂಸ್ಥೆಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸಂಸ್ಥೆಗಳ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ