Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ --- ನಿಗದಿತ ಗುರಿಯಂತೆ ಅರ್ಹ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ - ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ



ಕೊಪ್ಪಳ ಮೇ 27: ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್‌, ಸಿಖ್ ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ವಿವಿಧ ಯೋಜನೆಗಳಡಿಯಲ್ಲಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ಆರ್ಥಿಕವಾಗಿ ಸಬಲಿಕರಣಗೊಳಿಸಲು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸವ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲಿ. ಇದರ ಜೊತೆಗೆ ವಿವಿಧ ಇಲಾಖೆಗಳ ಮೂಲಕವು ಅಲ್ಪಸಂಖ್ಯಾತರಿಗಾಗಿಯೇ ಮೀಸಲಿಟ್ಟ ಅನುದಾನವನ್ನು ಸಹ ಅರ್ಹರಿಗೆ ತಲುಪಿಸಲು ಆಯಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನಿವೇಶನ, ಮನೆಗಳ ಹಂಚಿಕೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಪ್ರಚಾರ ಕಾರ್ಯಕ್ರಮ ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಮೊಹಮ್ಮದ ನಜೀರುದ್ದಿನ, ಮೆಹಬೂಬ್ ಪಾಷಾ ಮಾನ್ವಿ, ಪ್ರಶಾಂತ ಎಸ್. ದೇಸಾಯಿ, ಎಂ.ಮದರ್ ವಲಿಸಾಬ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ