Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ರಾಜ್ಯದಲ್ಲಿ ಹೊಸ ಯೋಜನೆಗಳಿಗೆ ಚಾಲನೆ

ಬೆಂಗಳೂರು06: ಯುವಕರಿಗೆ ಉತ್ತಮ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ 2026-27ರ ಕರ್ನಾಟಕ ಬಜೆಟ್‌ನಲ್ಲಿ ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್‌ಡಿಎ ಮತ್ತು ಜೆಟಿಎಸ್‌ಗಳ ಮೂಲಭೂತ ಸೌಕರ್ಯ ಹಾಗೂ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಐದು ವರ್ಷಗಳ ಅವಧಿಯಲ್ಲಿ ಒಟ್ಟು ರೂ.1,386 ಕೋಟಿ ವೆಚ್ಚದಲ್ಲಿ “K-QUEST” (ಕರ್ನಾಟಕ – ಕ್ವಾಲಿಟಿ ಅಪ್‌ಗ್ರಡೆಷನ್ ಫಾರ್ ಎಂಪ್ಲಾಯ್ಮೆಂಟ್ ಎಂಡ್ ಸ್ಕಿಲ್ ಟ್ರಾನ್ಸ್‌ಫಾರ್ಮೇಷನ್) ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.
ಇದಲ್ಲದೆ, ಕೇಂದ್ರ ಸರ್ಕಾರದ PM-SETU ಯೋಜನೆ ಅಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ, ರಾಜ್ಯ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ಹಬ್ ಎಂಡ್ ಸ್ಪೋಕ್ ಮಾದರಿಯಲ್ಲಿ ಕ್ಲಸ್ಟರ್‌ಗಳಾಗಿ ಉನ್ನತೀಕರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ರೂ.241 ಕೋಟಿ ವೆಚ್ಚದಲ್ಲಿ ಎರಡು ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಮತ್ತೊಂದು ಮಹತ್ವದ ಘೋಷಣೆಯಾಗಿ, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ ರೂ.16 ಕೋಟಿ ವೆಚ್ಚದಲ್ಲಿ Schneider Electric ಯೂತ್ ಇಂಪ್ಯಾಕ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಈ ಕೇಂದ್ರಗಳ ಮೂಲಕ ಪ್ರತಿ ವರ್ಷ ಒಟ್ಟು 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಉದ್ಯೋಗಾವಕಾಶ ಕಲ್ಪಿಸಲು ಸಹಾಯವಾಗಲಿದೆ.
ಈ ಕ್ರಮಗಳಿಂದ ರಾಜ್ಯದ ಯುವಕರಿಗೆ ನವೀನ ಕೌಶಲ್ಯ ತರಬೇತಿ ದೊರೆಯುವುದರೊಂದಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು