Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ರಾಜ್ಯದಲ್ಲಿ ಹೊಸ ಯೋಜನೆಗಳಿಗೆ ಚಾಲನೆ

ಬೆಂಗಳೂರು06: ಯುವಕರಿಗೆ ಉತ್ತಮ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ 2026-27ರ ಕರ್ನಾಟಕ ಬಜೆಟ್‌ನಲ್ಲಿ ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್‌ಡಿಎ ಮತ್ತು ಜೆಟಿಎಸ್‌ಗಳ ಮೂಲಭೂತ ಸೌಕರ್ಯ ಹಾಗೂ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಐದು ವರ್ಷಗಳ ಅವಧಿಯಲ್ಲಿ ಒಟ್ಟು ರೂ.1,386 ಕೋಟಿ ವೆಚ್ಚದಲ್ಲಿ “K-QUEST” (ಕರ್ನಾಟಕ – ಕ್ವಾಲಿಟಿ ಅಪ್‌ಗ್ರಡೆಷನ್ ಫಾರ್ ಎಂಪ್ಲಾಯ್ಮೆಂಟ್ ಎಂಡ್ ಸ್ಕಿಲ್ ಟ್ರಾನ್ಸ್‌ಫಾರ್ಮೇಷನ್) ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.
ಇದಲ್ಲದೆ, ಕೇಂದ್ರ ಸರ್ಕಾರದ PM-SETU ಯೋಜನೆ ಅಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ, ರಾಜ್ಯ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ಹಬ್ ಎಂಡ್ ಸ್ಪೋಕ್ ಮಾದರಿಯಲ್ಲಿ ಕ್ಲಸ್ಟರ್‌ಗಳಾಗಿ ಉನ್ನತೀಕರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ರೂ.241 ಕೋಟಿ ವೆಚ್ಚದಲ್ಲಿ ಎರಡು ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಮತ್ತೊಂದು ಮಹತ್ವದ ಘೋಷಣೆಯಾಗಿ, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ ರೂ.16 ಕೋಟಿ ವೆಚ್ಚದಲ್ಲಿ Schneider Electric ಯೂತ್ ಇಂಪ್ಯಾಕ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಈ ಕೇಂದ್ರಗಳ ಮೂಲಕ ಪ್ರತಿ ವರ್ಷ ಒಟ್ಟು 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಉದ್ಯೋಗಾವಕಾಶ ಕಲ್ಪಿಸಲು ಸಹಾಯವಾಗಲಿದೆ.
ಈ ಕ್ರಮಗಳಿಂದ ರಾಜ್ಯದ ಯುವಕರಿಗೆ ನವೀನ ಕೌಶಲ್ಯ ತರಬೇತಿ ದೊರೆಯುವುದರೊಂದಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ