Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೇಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ. ಕಾರ್ಯಕರ್ತರಿಂದ ಪ್ರತಿಭಟನೆ:

ಸಿರುಗುಪ್ಪ.ಏ.10:- ರಾಜ್ಯ ಕಾಂಗ್ರೇಸ್ ಪಕ್ಷದ ಸರ್ಕಾರದ ಜನ ವಿರೋಧಿ ಧೋರಣೆ ನೀತಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲೂಕು ಬಿ.ಜೆ.ಪಿ. ಘಟಕದ ವತಿಯಿಂದ ಮಾಜಿ ಶಾಸಕ ಎಂ.ಎಸ್.ಸೊಮಲಿoಗಪ್ಪ ನೇತೃತ್ವದಲ್ಲಿ ಗುರುವಾರ ನಗರದ ಗಾಂಧಿವೃತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಎಸ್.ಸೋಮಲಿoಗಪ್ಪ ಮಾತನಾಡಿ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಬರೆ ಎಳೆದಿದೆ, ಒಂದು ಸಮುದಾಯದ ಪರ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು ರಾಜ್ಯ ಸರ್ಕಾರದ ಬಡ್ಜೆಟ್ ಪುಸ್ತಕದ ಅರ್ಧಭಾಗ ಮುಸ್ಲಿಂ ತುಷ್ಟಿಕರಣದ ಕಾರ್ಯಕ್ರಮ ಘೋಷಿಸಲಾಗಿದೆ. ಮುಸ್ಲಿಂ ಗುತ್ತಿಗೆದಾರರಿಗೆ ಶೇಕಡ 4ರಷ್ಟು ಮೀಸಲಾತಿ, 250 ಉರ್ದು ಮಾಧ್ಯಮ ಶಾಲೆಗಳಿಗೆ ರೂ.500ಕೋಟಿ ಅನುದಾನ, ಮೌಲನಾ ಆಜಾದ್ ಶಾಲೆಗಳಿಗೆ 400 ಕೋಟಿ ಸೇರಿದಂತೆ ಹಲವುಯೋಜನೆಗಳನ್ನು ಘೋಷಿಸಲಾಗಿದೆ. ಇರವನ್ನು ಬಿಟ್ಟು ರಾಜ್ಯದಲ್ಲಿ ಬೇರೆ ಯಾವ ಧರ್ಮದವರು ಉನ್ನತ ಶಿಕ್ಷಣ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು 25ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ನಿಜವಾಗಿ ಕರಾಟೆ ತರಬೇತಿ, ಹಿಂದೂ ಹೆಣ್ಣು ಮಕ್ಕಳಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಬಿ.ಜೆ.ಪಿ.ತಾ.ಅಧ್ಯಕ್ಷ ಹೆಚ್.ಎಂ.ಮಲ್ಲಿಕಾರ್ಜುನಸ್ವಾಮಿ ಕುಂಟ್ನಾಳ್, ಬಿ.ಜೆ.ಪಿ.ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್.ಸಿದ್ದಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಈರಣ್ಣ, ಮುಖಂಡರಾದ ಧರಪ್ಪ ನಾಯಕ, ಮಹಾದೇವ, ಬಂಡ್ರಾಳ್ ಮಲ್ಲಿಕಾರ್ಜುನ, ಮುದೇನೂರು ವೀರೇಶ, ಬಿ.ಹನುಮೇಶ, ಪೂಜಾರಿ ಗಾದಿಲಿಂಗ, ಪೂಜಾರಿ ಶ್ರೀನಿವಾಸ ಮತ್ತು ವಿವಿಧ ಗ್ರಾಮಗಳ ಕಾರ್ಯಕರ್ತರು ಇದ್ದರು.
ರಾಜ್ಯ ಕಾಂಗ್ರೇಸ್ ಪಕ್ಷದ ಸರ್ಕಾರದ ಜನ ವಿರೋಧಿ ಧೋರಣೆ ನೀತಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲೂಕು ಬಿ.ಜೆ.ಪಿ. ಘಟಕದ ವತಿಯಿಂದ ಮಾಜಿ ಶಾಸಕ ಎಂ.ಎಸ್.ಸೊಮಲಿoಗಪ್ಪ ನೇತೃತ್ವದಲ್ಲಿ ನಗರದ ಗಾಂಧಿವೃತದಲ್ಲಿ ಪ್ರತಿಭಟನೆ ನಡೆಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ