Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ಬೆಂಬಲ ಯೋಜನೆಯಡಿ ಬಿಳಿ ಜೋಳ ಖರೀದಿ





ಬಳ್ಳಾರಿ,ಜ.16:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾ0ಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿಜೋಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

*ಬೆoಬಲ ಬೆಲೆ:*

ಬಿಳಿ ಜೋಳ-ಹೈಬ್ರೀಡ್ : ರೂ.3,699 (ಪ್ರತಿ ಕ್ವಿಂ)

ಬಿಳಿ ಜೋಳ-ಮಾಲ್ದಂಡಿ : ರೂ.3,749 (ಪ್ರತಿ ಕ್ವಿಂ)

*ಖರೀದಿ ಕೇಂದ್ರಗಳ ವಿವರ:*

ಬಳ್ಳಾರಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಬಳ್ಳಾರಿ ಮತ್ತು ಮೋಕಾ, ಅಸುಂಡಿ, ರೂಪನಗುಡಿ, ಅಮರಾಪುರ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕುರುಗೋಡು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು, ಕರೂರು, ಹಚ್ಚೋಳ್ಳಿ, ಬೂದುಗುಪ್ಪ, ಬಿ.ಎಂ.ಸೂಗೂರು, ತಾಳೂರು, ಮುದ್ದಟನೂರು, ಅರಳಿಗನೂರು, ಸಿರಿಗೇರಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕoಪ್ಲಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಕಂಪ್ಲಿ ಮತ್ತು ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ರೈತರು ಮೇಲ್ಕಂಡ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಇಲಾಖೆಯಿಂದ ಪಡೆದಿರುವ ಫ್ರೂಟ್ಸ್ ಐ.ಡಿ ಮತ್ತು ಆಧಾರ್ ನೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಬಿಳಿಜೋಳ /ಬೀಜೋತ್ಪಾದನೆ ಬೆಳೆಗಳನ್ನು ಬೆಳೆದಿದ್ದು, ಜೋಳವೆಂದು ನಮೂದಿಸಿಕೊಂಡು ಜೋಳ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿದಲ್ಲಿ ಅಥವಾ ಅಕ್ರಮ ಜೋಳ ನೋಂದಣಿ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ