Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಸರ್ಕಾರದಿಂದ ಪ್ರಶಂಸನಾ ಪತ್ರ


ರಾಯಚೂರು ಜುಲೈ 02 : ರಾಯಚೂರ ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರಿಗೆ ಸರಕಾರದಿಂದ ಪ್ರಶಂಸನಾ ಪತ್ರ ಲಭಿಸಿದೆ.
ಕಳೆದ ಮೇ 14ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರಾಯಚೂರ ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ (ಎಸ್‌ಎಚ್ಸಿ) ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ), ಮನರೇಗಾ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹೀಗೆ ನಾನಾ ಯೋಜನೆಗಳ ಅನುಷ್ಠಾನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಮುಖ್ಯಮಂತ್ರಿಗಳು ಗಮನಿಸಿ, ಸಂಬAಧಿಸಿದ ಸಾಧನೆ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲು ತಿಳಿಸಿದ್ದಾರೆ. ಈ ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲ ಸಿಬ್ಬಂದಿಯ ಅಚಲ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಯೇ ಕಾರಣ. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಪಂ ಸಿಇಓ ರಾಹುಲ್ ಪಾಂಡ್ವೆ ಅವರಿಗೆ ನೀಡಿದ ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ