Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು: ಪ್ರೊ.ಎಂ.ಮುನಿರಾಜು



ಬಳ್ಳಾರಿ,ಮಾ.21



ಪತ್ರಿಕೋದ್ಯಮ ಎಂಬುದು ಜನರ ಜೀವನಾಡಿಯಂತಿದ್ದು, ಬದಲಾಗುತ್ತಿರುವ ಶಿಕ್ಷಣ ಕ್ರಮದಲ್ಲಿ ಕೌಶಲ್ಯ ಆಧಾರಿತ ತಾಂತ್ರಿಕ ಕಲಿಕೆಗೆ ಒತ್ತು ನೀಡಬೇಕು. ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಹೇಳಿದರು.

ಶುಕ್ರವಾರದಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.

ಪತ್ರಿಕೋದ್ಯಮ ಶಿಕ್ಷಣ ಗಟ್ಟಿಗೊಳಿಸಲು ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಸುಸಜ್ಜಿತ ಸ್ಟುಡಿಯೋ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕುಲಸಚಿವರಾದ ರುದ್ರೇಶ್ ಎಸ್.ಎನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಬರೆಯಬೇಕು. ಬರೆಯುವುದರಿಂದ ಬರವಣಿಗೆಯಲ್ಲಿನ ಲೋಪದೋಷಗಳು ಮನವರಿಕೆಯಾಗುತ್ತವೆ. ಇದರಿಂದ ಬರವಣಿಗೆಯ ಕೌಶಲ್ಯ ವೃದ್ಧಿಸುತ್ತದೆ. ಇದರ ಜೊತೆಗೆ ಮಾತನಾಡುವ ಕೌಶಲ್ಯವನ್ನು ಸಹ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವರದಿಗಾರ ಹರಿಶಂಕರ್ ಜಿ.ಪಾಳ್ಯ ಅವರು ಮಾತನಾಡಿ, ತನಿಖಾ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳುವವರು ನಿರ್ಭೀತಿ ಮತ್ತು ಆಮೀಷಕ್ಕೆ ತುತ್ತಾಗದಂತೆ ಕೆಲಸ ಮಾಡುವುದು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಪತ್ರಿಕೋದ್ಯಮ ಎಂಬುದು ಹುಲಿಯ ಮೇಲಿನ ಸವಾರಿ ಇದ್ದಂತೆ. ಅಡ್ಡದಾರಿ ಹಿಡಿಯದೆ ನೈತಿಕ ಪತ್ರಿಕೋದ್ಯಮವನ್ನು ಅಂತರಾಳ ಮಾಡಿಕೊಂಡು ಕೆಲಸ ನಿರ್ವಹಿಸಿದಲ್ಲಿ ಯಾರ ಹಂಗಿಲ್ಲದೆ ಈ ಕ್ಷೇತ್ರದಲ್ಲಿ ಮುಂದುವರೆಯಬಹುದು ಎಂದು ತಿಳಿಸಿದರು.

ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ರಾಕೇಶ್ ವಿ.ತಾಳಿಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಧನುಂಜಯ ಭಟ್ ಸ್ವಾಗತಿಸಿದರು. ಡಾ.ಜಯರಾಜ.ಹೆಚ್ ನಿರೂಪಿಸಿ ವಂದಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು