Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

“ರಿಯಲ್ ಹೀರೋಗಳು ನಮ್ಮ ತಂದೆ-ತಾಯಿಗಳು”: ಪ್ರಾಂಶುಪಾಲ ಬಿ.ಶ್ರೀನಿವಾಸ್ ಸಲಹೆ

ಸಂಡೂರು, ಜೂನ್ 30:

ಶನಿವಾರದಂದು ಸಂಡೂರು ಪಟ್ಪಣದ ಎಸ್.ಇ.ಎಸ್ ವಿದ್ಯಾಮಂದಿರ ಸಂಯುಕ್ತ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅದ್ಧೂರಿಯಾಗಿ ಸ್ವಾಗತ ಕಾರ್ಯಕ್ರಮ ಹಾಗೂ ಸಿಇಟಿ (CET), ಸಿಎಮ್‌ಎ (CMA), ನಿಟ್ (NEET), ಜೆಇಇ (JEE) ತರಬೇತಿ ಉದ್ಘಾಟನಾ ಸಮಾರಂಭ ನಡೆಯಿತು.


ಕಾರ್ಯಕ್ರಮಕ್ಕೆ ಎಸ್‌ಇಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಜಗದೀಶ್ ಬಸಾಪುರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶ್ರಮದ ಮಹತ್ವ, ಸ್ಪರ್ಧಾತ್ಮಕ ಪರೀಕ್ಷೆಗಳ ಅವಶ್ಯಕತೆ ಮತ್ತು ಸಂಸ್ಥೆಯ ಶಿಕ್ಷಣ ಧೋರಣೆಯ ಕುರಿತು ಉಜ್ವಲ ಸಂದೇಶ ನೀಡಿದರು. ಅವರು ಮಾತನಾಡುತ್ತಾ, “ನಮ್ಮ ಎಸ್‌ಇಎಸ್ ಮಹಾವಿದ್ಯಾಲಯವು ಇತರ ವಿದ್ಯಾಸಂಸ್ಥೆಗಳಿಂದ ವಿಭಿನ್ನವಾಗಿದೆ. ಇಲ್ಲಿ ನಾವು ವಿದ್ಯಾರ್ಥಿಗಳ ಭವಿಷ್ಯವನ್ನು ನೇರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ದಾರಿ ಹಾಕುವ ದೃಷ್ಟಿಯಿಂದ ವೇದಿಕೆ ರೂಪಿಸಿದ್ದೇವೆ. ಸಿಇಟಿ, ಸಿಎಮ್‌ಎ, ನಿಟ್ ಹಾಗೂ ಜೆಇಇ ತರಬೇತಿ ಈ ಕಾಲೇಜಿನಲ್ಲಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ ಪಡೆಯಬೇಕು,” ಎಂದು ಹೇಳಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಬಿ. ಶ್ರೀನಿವಾಸ್ ವಹಿಸಿ ಮಾತನಾಡಿದರು. ಅವರು ವಿದ್ಯಾರ್ಥಿಗಳಿಗೆ ಪ್ರೇರಣೆಯ ಮಾತುಗಳನ್ನಾಡಿ, “ನೀವು ಸಿನಿಮಾ ರೀಲ್ ಹೀರೋಗಳಿಗಿಂತ, ನಿಮ್ಮ ಜೀವನದ ನಿಜವಾದ ಹೀರೋಗಳಾದ ತಂದೆ ತಾಯಿಗಳನ್ನು ಆದರ್ಶವನ್ನಾಗಿ ಇರಿಸಿಕೊಳ್ಳಿ. ಶಿಕ್ಷಣ ಎಂಬ ಶಸ್ತ್ರವನ್ನು ಉಪಯೋಗಿಸಿ ಬದುಕಿನಲ್ಲಿ ಎತ್ತರಕ್ಕೆ ಏರಬೇಕೆಂಬ ನಿಟ್ಟಿನಲ್ಲಿ ಈ ತರಹದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ,” ಎಂದು ಸಲಹೆ ನೀಡಿದರು.


ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಕುಲಕರ್ಣಿ ನಿರೂಪಿಸಿ ಸೃಜನಾತ್ಮಕವಾಗಿ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅತಿಥಿಗಳಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು ಮತ್ತು ವಂದಿಸಿದರು.


ಈ ಕಾರ್ಯಕ್ರಮದ ಮೂಲಕ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಉಜ್ವಲ ಪ್ರಾರಂಭಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯಕ್ಕೆ ಚಾಲನೆ ದೊರೆಯಿತು. ವಿದ್ಯಾರ್ಥಿಗಳು ಮತ್ತು ಪಾಲಕರು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ