Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿವಿಪಿ ತಾಲೂಕು ನೂತನ ಪದಾಧಿಕಾರಿಗಳ ನೇಮಕಾತಿ.

ಸಿಂಧನೂರು: ನಗರದ ಪ್ರವಾಸಿ ಮಂದಿರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ ನೇತೃತ್ವದಲ್ಲಿ ನೂತನ ತಾಲೂಕು ಪದಾಧಿಕಾರಿಗಳನ್ನು ನೇಮಕಾತಿ ಮಾಡಲಾಯಿತು.ನೂತನ ತಾಲೂಕ ಸಂಚಾಲಕರಾಗಿ ದುರುಗೇಶ್ ಕಲಮಂಗಿ, ಪ್ರಧಾನ ಕಾರ್ಯದರ್ಶಿ ನರಸಪ್ಪ ಅಮರಾಪುರ, ಕಾರ್ಯದರ್ಶಿ ಶರಣಬಸವ ಕಲ್ಮಂಗಿ, ಮಹಮ್ಮದ್ ಸುಲೇಮಾನ್,ಹನುಮಂತ  ಆಯ್ಕೆಯಾದರು.


ರಾಜ್ಯಾದ್ಯಂತ ವಿದ್ಯಾರ್ಥಿ  ಯುವಜನರನ್ನು ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಾಮಾಜಿಕವಾಗಿ ವೈಚಾರಿಕವಾಗಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದರ ಜೊತೆಗೆ ಅವರನ್ನು ಯುವ ನಾಯಕರನ್ನಾಗಿ ಪರಿವರ್ತಿಸುವ ಭಾಗವಾಗಿ ಇಂದು ರಾಜ್ಯಾದ್ಯಂತ ಹೆಸರು ವಾಸಿಯಾದ ಸಂಘಟನೆಯಾಗಿದೆ.ಮತ್ತು ವಿಶೇಷವಾಗಿ ವಿದ್ಯಾರ್ಥಿ ಯುವ ಜನರ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸ್ವತಹ ನಾವೇ ಸಂಘಟನಾತ್ಮಕ ಚಟುವಟಿಕೆಗಳ ಮುಖಾಂತರ ನಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಚತುರರಾಗಬೇಕು. ಬಹು ಮುಖ್ಯವಾಗಿ ಶಿಕ್ಷಣಕ್ಕೆ ನಾವು ಪ್ರಮುಖ ಆದ್ಯತೆಯನ್ನು ಕೊಟ್ಟು ನಮ್ಮ ಜೀವನವನ್ನು ಸಾಕಾರಗೊಳ್ಳಲು ಕಾರ್ಯಪ್ರವೃತ್ತರಾಗಬೇಕು ಈ ಸಂದರ್ಭದಲ್ಲಿ ನಮಗೆ ಎದುರಾಗುವ ಶೈಕ್ಷಣಿಕ ತೊಡಕುಗಳು ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಡುವ ಪ್ರಜ್ಞಾವಂತರಾಗಬೇಕು. ಹಾಗಾದಾಗ ಮಾತ್ರ ನಮ್ಮ ವಿಮೋಚನೆ ಸಾಧ್ಯ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರು ಕೂಡಲೇ ವಿದ್ಯಾರ್ಥಿ ಯುವ ಜನರ ಕಲ್ಯಾಣಕ್ಕಾಗಿ ಶ್ರಮ ವಹಿಸಲು ಕಾರ್ಯಯೋನ್ಮುಖರಾಗಬೇಕು ಎಂದು ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ  ಕರೆಕೊಟ್ಟರು.


ಈ  ಸಂದರ್ಭದಲ್ಲಿ ಮುಖಂಡರಾದ ಮೌನೇಶ ತುಗ್ಗಲದಿನ್ನಿ, ಬಂಡೆಗುರು ಕರೆಗುಡ್ಡ, ಚೆನ್ನಬಸವ ಯಾಪಲಪರ್ವಿ, ರಸೀದ ಬನ್ನಿಗನೂರು, ಪ್ರಶಾಂತ,ಮಂಜುನಾಥ, ಹನುಮಂತ ವಿರುಪಾಪುರ, ಅಫ್ಜಲ್ ಕಲಮಂಗಿ, ಎರಿಸ್ವಾಮಿ ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ