Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾನ್ಯೂನತೆ : ಪರಿಹಾರ ನೀಡಲು ಆದೇಶ


ಶಿವಮೊಗ್ಗ, ಜುಲೈ 21) : ದೂರುದಾರರಾದ ಶಿವಮೊಗ್ಗದ ದುರ್ಗಿಗುಡಿ ಆನಂದಮೂರ್ತಿ ಡಿ.ಹೆಚ್. ಎಂಬುವವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರ ವಿರುದ್ಧ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರ ಆನಂದಮೂರ್ತಿಯವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರಿಂದ ವೈದ್ಯಕೀಯ ವಿಮಾ ಪಾಲಿಸಿಯನ್ನು ಪಡೆದಿದ್ದು, ಮೇ 2024 ರಂದು ಹೃದಯ ಸಂಬAಧಿತ ಕಾಯಿಲೆಗೆ ಚಿಕಿತ್ಸೆ ಪಡೆದು, ಚಿಕಿತ್ಸೆ ವೆಚ್ಚ ರೂ. 2.50 ಲಕ್ಷಗಳ ಬಿಲ್‌ಗಳನ್ನು ಸಲ್ಲಿಸಿ ಕ್ಲೇಮ್ ಮೊತ್ತವನ್ನು ನೀಡಲು ಕೋರಿರುತ್ತಾರೆ. ಆದರೆ ಎದುರುದಾರ ಇನ್ಷೂರನ್ಸ್ ಕಂಪನಿಯು ಪಾಲಿಸಿ ಪಡೆಯುವಾಗ ದೀರ್ಘಕಾಲದ ಕಾಯಿಲೆಯಿರುವುದನ್ನು ಮರೆಮಾಚಿರುತ್ತಾರೆ ಎಂಬ ಕಾರಣ ನೀಡಿ ವಿಮಾ ಹಣವನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ದೂರು ಸಲ್ಲಿರುತ್ತಾರೆ.

ಆಯೋಗವು ದೂರನ್ನು ದಾಖಲಿಸಿಕೊಂದು, ಎದುರುದಾರರಿಗೆ ನೀಡಿದ ನೋಟಿಸ್‌ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ಫೆ. 2025 ರಂದು ಅರ್ಹದಾಯಕ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲಾಗಿದೆ ಹಾಗೂ ತಮ್ಮಿಂದ ಯಾವುದೇ ಸೇವಾ ನ್ಯೂನತೆಯಾಗಿರುವುದಿಲ್ಲವಾದ ಕಾರಣ ದೂರನ್ನು ವಜಾ ಮಾಡಬೇಕಾಗಿ ವಿನಂತಿಸಿರುತ್ತಾರೆ.

ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ ಮತ್ತು ದೂರುದಾರರು ಆಯೋಗಕ್ಕೆ ದೂರು ಸಲ್ಲಿಸಿದ ನಂತರ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಿರುವುದರಿಂದ ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರುದಾರರು ಸಲ್ಲಿಸಿರುವ ದೂರನ್ನು ಪುರಸ್ಕರಿಸಿ, ವೈದ್ಯಕೀಯ ವೆಚ್ಚದ ಮೊತ್ತ ರೂ.2,28,018 ಗಳಿಗೆ ವಾರ್ಷಿಕ ಶೇ.9 ರಂತೆ ಬಡ್ಡಿಯನ್ನು ದಿ: 27/06/2024 ರಿಂದ ದಿ:13/02/2025ರವರೆಗೆ ಈ ಆದೇಶವಾದ 45 ದಿನಗಳೊಳಗಾಗಿ ಪಾವತಿಸಲು, ತಪ್ಪಿದಲ್ಲಿ ವಿಮಾ ಮೊತ್ತಕ್ಕೆ ಶೇ.12 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡುವುದು ಹಾಗೂ ರೂ.27,000/- ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು, ತಪ್ಪಿದಲ್ಲಿ ವಿಮಾ ಮೊತ್ತಕ್ಕೆ ಶೇ.12 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಜು.07 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಗಂಗಾಧರ ನಾಯ್ಕ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ