Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಚೀನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ


ಬಳ್ಳಾರಿ,ಆ.15



ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯದಲ್ಲಿ ಹಲವಾರು ಪುರಾತನ ಪಳೆಯುಳಿಕೆಗಳನ್ನು ಸಂಗ್ರಹಿಸಲಾಗಿದ್ದು, ಆಕರ್ಷಣೀಯ ವಸ್ತು ಸಂಗ್ರಹಾಲಯಗಳಲ್ಲಿ ಒಂದಾಗಿದೆ. ಹಲವಾರು ವಸ್ತುವಿಷಯಗಳನ್ನು ಒಳಗೊಂಡಿದ್ದು, ವಸ್ತುಸಂಗ್ರಹಾಲಯದ ನಿರ್ವಹಣೆಯು ಅಚ್ಚುಕಟ್ಟಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.


ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯವು ಶಿಲಾಯುಗದ ಉಪಕರಣಗಳ ವಿಶಿಷ್ಟವಾದ ಇತಿಹಾಸ ಪೂರ್ವ ಮಾಹಿತಿ ಒಳಗೊಂಡಿದೆ. ಶಿಲಾಯುಗದ ಮೇಲೆ ಕೇಂದ್ರೀಕೃತವಾಗಿರುವ ಏಕೈಕ ವಸ್ತು ಸಂಗ್ರಹಾಲಯವು ಇದಾಗಿದೆ ಎಂದು ತಿಳಿಸಿದರು.

*ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ವಿಶೇಷ:*

ದೇಶದಲ್ಲಿಯೇ ಪ್ರಾಗೈತಿಹಾಸಕ್ಕಾಗಿ ಮೀಸಲಿಟ್ಟ ಏಕೈಕ ವಸ್ತು ಸಂಗ್ರಹಾಲಯವಾಗಿದೆ. ಪ್ರಪಂಚದ ವಿವಿಧ ದೇಶಗಳಲ್ಲಿ ವಿವಿಧ ಕಾಲಗಟ್ಟಗಳಲ್ಲಿ ದೊರೆತ ತಲೆಬುರುಡೆಗಳು ಮಾದರಿಗಳಿವೆ ಹಾಗೂ ಆಫ್ರಿಕಾದಲ್ಲಿ ಸಿಕ್ಕಂತಹ ಶಿಲಾ ಉಪಕರಣಗಳ ಮಾದರಿಗಳು ಇವೆ.

ಈ ವೇಳೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ತಹಶೀಲ್ದಾರ ಗುರುರಾಜ, ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಸದಸ್ಯ ಸಂತೋಷ್ ಮಾರ್ಟಿನ್, ಅಹಿರಾಜ್, ತಾಂತ್ರಿಕ ಸಹಾಯಕರಾದ ಗೌರಿ ಸೇರಿದಂತೆ ಇತರರು ಇದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು