Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಚೀನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ


ಬಳ್ಳಾರಿ,ಆ.15



ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲುಪ್ರಾಚೀನವಸ್ತು ಸಂಗ್ರಹಾಲಯದಲ್ಲಿ ಹಲವಾರು ಪುರಾತನ ಪಳೆಯುಳಿಕೆಗಳನ್ನು ಸಂಗ್ರಹಿಸಲಾಗಿದ್ದು, ಆಕರ್ಷಣೀಯ ವಸ್ತು ಸಂಗ್ರಹಾಲಯಗಳಲ್ಲಿ ಒಂದಾಗಿದೆ. ಹಲವಾರು ವಸ್ತುವಿಷಯಗಳನ್ನು ಒಳಗೊಂಡಿದ್ದು, ವಸ್ತುಸಂಗ್ರಹಾಲಯದ ನಿರ್ವಹಣೆಯು ಅಚ್ಚುಕಟ್ಟಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.


ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯವು ಶಿಲಾಯುಗದ ಉಪಕರಣಗಳ ವಿಶಿಷ್ಟವಾದ ಇತಿಹಾಸ ಪೂರ್ವ ಮಾಹಿತಿ ಒಳಗೊಂಡಿದೆ. ಶಿಲಾಯುಗದ ಮೇಲೆ ಕೇಂದ್ರೀಕೃತವಾಗಿರುವ ಏಕೈಕ ವಸ್ತು ಸಂಗ್ರಹಾಲಯವು ಇದಾಗಿದೆ ಎಂದು ತಿಳಿಸಿದರು.

*ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ವಿಶೇಷ:*

ದೇಶದಲ್ಲಿಯೇ ಪ್ರಾಗೈತಿಹಾಸಕ್ಕಾಗಿ ಮೀಸಲಿಟ್ಟ ಏಕೈಕ ವಸ್ತು ಸಂಗ್ರಹಾಲಯವಾಗಿದೆ. ಪ್ರಪಂಚದ ವಿವಿಧ ದೇಶಗಳಲ್ಲಿ ವಿವಿಧ ಕಾಲಗಟ್ಟಗಳಲ್ಲಿ ದೊರೆತ ತಲೆಬುರುಡೆಗಳು ಮಾದರಿಗಳಿವೆ ಹಾಗೂ ಆಫ್ರಿಕಾದಲ್ಲಿ ಸಿಕ್ಕಂತಹ ಶಿಲಾ ಉಪಕರಣಗಳ ಮಾದರಿಗಳು ಇವೆ.

ಈ ವೇಳೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ತಹಶೀಲ್ದಾರ ಗುರುರಾಜ, ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಸದಸ್ಯ ಸಂತೋಷ್ ಮಾರ್ಟಿನ್, ಅಹಿರಾಜ್, ತಾಂತ್ರಿಕ ಸಹಾಯಕರಾದ ಗೌರಿ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ