Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಪೂರೈಸಿದರೆ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಕ್ಷೇತ್ರವು ಸಂಪೂರ್ಣ ಹಳ್ಳಿಗಳಿಂದ ಕೂಡಿದ್ದು ಕ್ಷೇತ್ರದ ಪ್ರತಿಯೊಂದು ಗ್ರಾಮಗಳ ರಸ್ತೆ ಸುಧಾರಣೆ ಮೂಲ ಸೌಕರ್ಯ ಒದಗಿಸುವುದು   ಅತ್ಯಂತ ಅವಶ್ಯಕವಾಗಿರುವದರಿಂದ  ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದು  ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ ಗ್ರಾಮದಿಂದ ಮಲ್ಕಾಪುರ ಗ್ರಾಮದವರೆಗಿನ ಸುಮಾರು ೫ ಕೋಟಿ ರೂ, ವೆಚ್ಚದ  ರಸ್ತೆ  ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆ, ಕುಡಿಯುವ ನೀರು, ನೀರಾವರಿ, ಶಾಲೆ ಕಟ್ಟಡ, ಸಮುದಾಯ ಭವನ, ಯಾತ್ರಿ ನಿವಾಸ, ಸೇತುವೆ ಹೀಗೆ ಅನೇಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದ ಜನತೆಗಾಗಿ ಇರುವ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡುವುದು ನನ್ನ ಕರ್ತವ್ಯ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಅಪಾರ ಕಾಳಜಿ ನನಗಿದೆ ಎಂದರು.

ಕಾಮಗಾರಿಯಲ್ಲಿ ಲೋಪ ಕಾಣಬಾರದು. ಉತ್ತಮ ರೀತಿಯಲ್ಲಿ, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರು ಮುಂದಾಗಬೇಕು. ಮಳೆಗಾಲದಲ್ಲಿ ಗ್ರಾಮೀಣ ಪ್ರದೇಶದ ಸ್ವಚ್ಛತೆ ಇಲ್ಲದಿದ್ದರೆ. ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ ಹೀಗಾಗಿ  ಗ್ರಾಮದ ಅಭಿವೃದ್ಧಿಯಲ್ಲಿ ರಾಜಕೀಯವನ್ನು ಬದಿಗೊತ್ತಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು. .

ಮುಖಂಡರಾದ ಮಾಜಿ ಜಿಪಂ ಸದಸ್ಯ ಬಾಬುರಾವ ಮಲ್ಕಾಪುರ, ಸುರೇಶ ಮಾಶೆಟ್ಟಿ,   ಕುಶಲರಾವ ಶರಣಪ್ಪನೋರ,  ಚಂದ್ರಯ್ಯಾ ಸ್ವಾಮಿ, ಗುರುನಾಥ ಬಗದಲ್, ಓಂಕಾರ ಮಜಗೆ, ಜೋಸೇಫ ಕೊಡ್ಡೆಕರ್,  ಶಿವಕುಮಾರ ನಾಗಲಗಿದ್ದಿ,  ರಾಹುಲ ಮೋರೆ, ಶಿವು ಸುಲ್ತಾನಪುರ,  ಸಂಗಮೇಶ ಹಳ್ಳಿ, ಬಾಬುರಾವ ನಾಗಲಗಿದ್ದಿ, ಶಾಮಣ್ಣಾ, ಲೋಕೇಶ ಜೈನಾಪುರೆ, ಭದ್ರು ಸ್ವಾಮಿ ರಾಜಕುಮಾರ ಕೋಳಿ, ತುಕಾರಮಾ ಕಲಾಲ, ಆಕಾಶ ಕೋಟೆ, ಮಾರ್ಟಿನ್, ಸಂಜುಕುಮಾರ, ವಿಜಯಕುಮಾರ ಗುಮ್ಮಾ, ತುಕಾರಾಮ, ಧನರಾಜ ಭಾಲ್ಕಿ , ರಾಜಕುಮಾರ ರೆಡ್ಡಿ  ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ