Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾರ್ವಾ ಸಮೀಕ್ಷೆ ಕಾರ್ಯ: ನಗರ ಸ್ವಯಂ ಸೇವಕರ ಆಯ್ಕೆ

ಚಿತ್ರದುರ್ಗಜೂನ್.27:

2024-25ನೇ ಸಾಲಿಗೆ ಜಿಲ್ಲೆಯ ವಿವಿಧ ನಗರ ಪ್ರದೇಶಗಳ ಸಮಸ್ಯಾತ್ಮಕ ವಾರ್ಡ್ಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆ ಕಾರ್ಯವನ್ನು ನಡೆಸಲು ಅನುಷ್ಟಾನ ಮಾರ್ಗಸೂಚಿ ಪ್ರಕಾರ ಕೇವಲ 100 ದಿನಗಳ ಅವಧಿಗೆ ಮಾತ್ರ ತಾತ್ಕಾಲಿಕವಾಗಿ ನಗರ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುವುದು. ಈ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ.

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ನಗರ-09, ಚಳ್ಳಕೆರೆ-2, ಹಿರಿಯೂರು-2, ಹೊಸದುರ್ಗ-2 ರಂತೆ ನಗರ ಸ್ವಯಂ ಸೇವಕರು ನಗರ ಪ್ರದೇಶಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಯನ್ನು ನಡೆಸಲು, ಪ್ರತಿದಿನ ಕಡ್ಡಾಯವಾಗಿ 100 ಮನೆಗಳಿಗೆ ಬೇಟಿ ನೀಡಿ, ಒಳಾಂಗಣ ಮತ್ತು ಹೊರಾಂಗಣದ ಕೃತಕ ನೀರಿನ ಸಂಗ್ರಹಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಗೆ ನಡೆಸಲು ದಿನ ಒಂದಕ್ಕೆ ರೂ.200 ಗಳಂತೆ ಆಯ್ಕೆಗೊಂಡ ಸೇವಕರ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುವುದು.

ಈ ಸಮೀಕ್ಷೆಗೆ ಸೇರ ಬಯಸುವವರು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಆಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್ ಪುಸ್ತಕದ ಮೊದಲನೇ ಪುಟ ಮತ್ತು ಆಧಾರ್ ಕಾರ್ಡ್ನ ನಕಲು ಪ್ರತಿಗಳೊಂದಿಗೆ ಜೂನ್ 29 ರ ಸಂಜೆ 4.30ರೊಳಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗಳ ಕಚೇರಿ ಆವರಣದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗೆ ಖುದ್ದು ಹಾಜರಾಗಬೇಕು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡುವುದಿಲ್ಲ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ರೋಗವಾಹಕಗಳ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ