Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕ್ರಿಯವಲ್ಲದ ಪಕ್ಷಗಳಿಗೆ ರಾಜ್ಯ ಚುನಾವಣಾ ಆಯೋಗದಿಂದ ಶೋಕಾಸ್ ನೋಟೀಸ್ ದಾವಣಗೆರೆ ತಾಲ್ಲೂಕಿನ ವಿಚಾರ ಜಾಗೃತಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಜುಲೈ 18 ರಂದು ಆಯೋಗದ ವಿಚಾರಣೆಗೆ ಹಾಜರಾಗಲು ಸೂಚನೆ


ದಾವಣಗೆರೆ ಜುಲೈ.02: ಚುನಾವಣಾ ಆಯೋಗದಲ್ಲಿ 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 29ಎ ರನ್ವಯ ಸಂಘ, ಸಂಸ್ಥೆಯನ್ನು ರಾಜಕೀಯ ಪಕ್ಷವಾಗಿ ನೊಂದಾಯಿಸಲಾಗುತ್ತದೆ. ನೊಂದಾಯಿಸಿದ ಅಂತಹ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸಬೇಕು. ಆದರೆ ಕಳೆದ 6 ವರ್ಷಗಳಿಂದ ಯಾವುದೇ ಜನಪ್ರತಿನಿಧಿಗಳ ಸದನಗಳಿಗೆ, ವಿಧಾನಸಭೆ, ಉಪಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ವಿಚಾರ ಜಾಗೃತಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಮಾಡದಿರುವುದು ಕಂಡು ಬಂದಿದೆ.

ಸತತ ಆರು ವರ್ಷಗಳ ಕಾಲ ನೊಂದಾಯಿತ ಪಕ್ಷಗಳಿಂದ ಜನಪ್ರತಿನಿಧಿಗಳ ಸದನಗಳಿಗೆ ನಡೆಯುವ ಚುನಾವಣೆ, ವಿಧಾನಸಭೆ, ಉಪ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸದಿದ್ದಲ್ಲಿ ಅಂತಹ ಗುರುತಿಸಲಾದ ರಾಜಕೀಯ ಪಕ್ಷಗಳನ್ನು ನೊಂದಾಯಿತ ಪಕ್ಷಗಳ ಪಟ್ಟಿಯಿಂದ ಕೈಬಿಡಲು ಸಂವಿಧಾನದ 324 ನೇ ವಿಧಿ ಮತ್ತು 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 29ಎ ರಡಿ ತೆಗೆದು ಹಾಕಲು ಅಧಿಕಾರ ನೀಡಲಾಗಿದೆ.

ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಮನೆ ಸಂಖ್ಯೆ 275 ರ ವಿಳಾಸದಲ್ಲಿ ವಿಚಾರ ಜಾಗೃತಿ ಕಾಂಗ್ರೆಸ್ ಪಕ್ಷ ನೊಂದಣಿಯಾಗಿರುತ್ತದೆ. ಸದರಿ ಪಕ್ಷವು 2019 ರಿಂದ ಅಂದರೆ ಕಳೆದ 6 ವರ್ಷಗಳಿಂದ ಜನಪ್ರತಿನಿಧಿಗಳ ಸದನಗಳಿಗೆ ನಡೆಯುವ ಯಾವುದೇ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ನಿಲ್ಲಿಸದಿರುವುದರಿಂದ ಈ ಪಕ್ಷವು ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿರುವುದು ಸ್ಪಷ್ಟವಾಗಿರುತ್ತದೆ. ಆದ್ದರಿಂದ ಸದರಿ ಪಕ್ಷವನ್ನು ನೊಂದಾಯಿತ ರಾಜಕೀಯ ಪಕ್ಷಗಳ ಪಟ್ಟಿಯಿಂದ ಕೈಬಿಡುವ ಬಗ್ಗೆ ರಾಜ್ಯ ಚುನಾವಣಾ ಆಯೋಗದಲ್ಲಿ ಜುಲೈ 18 ರಂದು ವಿಚಾರಣೆ ನಿಗದಿ ಮಾಡಲಾಗಿದೆ.

ನೊಂದಾಯಿತ ರಾಜಕೀಯ ಪಕ್ಷಗಳು ಮುಂದುವರೆಯಲು ಬಯಸಿದಲ್ಲಿ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯಿಂದ ಮತ್ತು ಪಕ್ಷ ಅಸ್ತಿತ್ವದಲ್ಲಿ ಮುಂದುವರೆಯಲು ಎಲ್ಲಾ ದಾಖಲೆಗಳೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಜುಲೈ 18 ರೊಳಗಾಗಿ ಸಲ್ಲಿಸಬೇಕು.

ದಾಖಲೆಗಳನ್ನು ಸಲ್ಲಿಸಿ ವಿಚಾರಣಾ ಸಭೆಗೆ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿ ಅಥವಾ ಪಕ್ಷದ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗಬೇಕು. ಯಾವುದೇ ಉತ್ತರ ಬಾರದಿದ್ದಲ್ಲಿ ಆಯೋಗವು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ