Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಪರಿಶೋಧನೆ ತರಬೇತಿ

ಮಡಿಕೇರಿ ಜು.10ಸರ್ಕಾರದ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಅತ್ಯವಶ್ಯಕ ಎಂದು ಕೊಡಗು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾಜಿಕ ಪರಿಶೋಧನೆ ಗ್ರಾಮಸಭೆಯ ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ. ಇಂತಹ ಯೋಜನೆಗಳು ಮತ್ತು ಅದಕ್ಕೆ ವಿನಿಯೋಗಿಸಿದ ಹಣವು ಸೂಕ್ತವಾಗಿ ಬಳಕೆಯಾಗಿರುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವುದು ಸಾಮಾಜಿಕ ಪರಿಶೋಧನೆಯ ಆದ್ಯ ಕರ್ತವ್ಯವಾಗಿದೆ.

ಇಂತಹ ವರದಿಗಳನ್ನು ಗ್ರಾಮಸಭೆಯ ಮೂಲಕ ಪರಿಶೀಲಿಸುವುದು ತಾಲೂಕು ನೋಡಲ್ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಾಮಾಜಿಕ ಗ್ರಾಮಸಭೆಯನ್ನು ಕೈಗೊಳ್ಳುವ ಬಗೆ ಮತ್ತು ವರದಿಗಳನ್ನು ಪರಿಶೀಲಿಸುವ ಕುರಿತು ತರಬೇತಿ ಹಮ್ಮಿಕೊಂಡಿದ್ದು, ಇದರ ಉಪಯೋಗವನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲ್ಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಪಡೆದುಕೊಳ್ಳಬೇಕು ಎಂದರು.

ಇದೇ ವೇಳೆ 15 ನೇ ಹಣಕಾಸು ಯೋಜನೆಯ ಬಗ್ಗೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಮಹಾತ್ಮಗಾಂಧಿ ನರೇಗಾ ಯೋಜನೆಯ ಕುರಿತು ತಾಲೂಕು ವ್ಯವಸ್ಥಾಪಕರಾದ ಸತೀಶ್, ಸಾಮಾಜಿಕ ಪರಿಶೋಧನೆ ಗ್ರಾಮಸಭೆಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನದ ಪಾತ್ರ ಕುರಿತು ಜಿಲ್ಲಾ ಐಇಸಿ ಸಂಯೋಜಕ ಪವನ್ ಕುಮಾರ್, ಪಿ.ಎಂ.ಪೆಷಣ್ ಅಭಿಯಾನ್ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಕುರಿತಂತೆ ಸಾಮಾಜಿಕ ಪರಿಶೋಧನೆಯ ಜಿಲ್ಲಾ ವ್ಯವಸ್ಥಾಪಕರಾದ ಪ್ರೀತಂ ಪೆನ್ನಪ್ಪ ಮಾಹಿತಿ ನೀಡಿದರು. ಸ್ವಚ್ಛ ಭಾರತ್ ಮಿಷನ್ (ಗ್ರಾ.) ಜಿಲ್ಲಾ ಸಮಾಲೋಚಕಿ ಹರ್ಷಿತ ಎ.ಆರ್.ಪ್ರಾರ್ಥಿಸಿದರು.

ಜಿ.ಪಂ.ಸಹಾಯಕ ಕಾರ್ಯದರ್ಶಿ ಅಬ್ದುಲ್ ನಾಬಿ, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ