Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿತ್ತನೆ ಬೀಜ ಪೂರೈಕೆ

ಮಡಿಕೇರಿ ಜೂ.26-ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 557.2 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.15.7 ರಷ್ಟು ಕಡಿಮೆ ಮಳೆಯಾಗಿದೆ.

ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿದೆ, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 2171 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1237.3 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿರುತ್ತವೆ. ಇಲ್ಲಿಯವರೆಗೆ 691.15 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಹಾಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 43 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ 75 ಕ್ವಿಂ, ನಾಪೆ: 24.75 ಕ್ವಿಂ, ಭಾಗಮಂಡಲ:8.5 ಕ್ವಿಂ, ಹಾಗೂ ಸಂಪಾಜೆ:6 ಕ್ವಿಂ.ಗಳು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 86.51 ಕ್ವಿಂಟಾಲ್ ದಾಸ್ತಾನು ಇದ್ದು, ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ : 23.8 ಕ್ವಿಂ, ಶನಿವಾರಸಂತೆ: 29.25 ಕ್ವಿಂ, ಹಾಗೂ ಕೊಡ್ಲಿಪೇಟೆ: 32.5 ಕ್ವಿಂ.ಗಳು, ಕುಶಾಲನಗರ ತಾಲ್ಲೂಕಿನಲ್ಲಿ ಒಟ್ಟು 66.76 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:61.01 ಕ್ವಿಂ, ಸುಂಟಿಕೊಪ್ಪ:5.75 ಕ್ವಿಂ.ಗಳು, ವೀರಾಜಪೇಟೆ ತಾಲ್ಲೂಕಿನಲ್ಲಿ ಒಟ್ಟು 99.75 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:61.75 ಕ್ವಿಂ, ಅಮ್ಮತ್ತಿ:38 ಕ್ವಿಂ.ಗಳು, ಪೆನ್ನಂಪೇಟೆ ತಾಲ್ಲೂಕಿನಲ್ಲಿ ಒಟ್ಟು 253 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:101.25ಕ್ವಿಂ, ಹುದಿಕೇರಿ:69.75 ಕ್ವಿಂ, ಬಾಳೆಲೆ: 48.5 ಕ್ವಿಂ ಹಾಗೂ ಶ್ರೀಮಂಗಲ :33.5 ಕ್ವಿಂ.ಗಳು ದಾಸ್ತಾನು ಇರುತ್ತದೆ. ಜಿಲ್ಲೆಯಲ್ಲಿ ಒಟ್ಟು 540.91 ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಇರುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು