Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂರು ಕಳೆದು ಕೊಂಡವರಿಗೆ ತಾತ್ಕಾಲಿಕ ಗುಡಿಸಲು ನಿರ್ಮಾಣ ಮಾಡಿದ ಶ್ರೀರಾಮುಲು*

ಬಳ್ಳಾರಿ: ಜು 07  ಕಳೆದ ಹತ್ತು ದಿನಗಳ ಹಿಂದೆ ತಾಳೂರು ರಸ್ತೆ ಹೆಚ್ಎಲ್ಸಿ ಸಬ್ ಕೆನಾಲ್ (ನಂಬರ್ 6 ಡಿವಿಜನ್ ಕ್ಯಾನಲ್) ಮೇಲೆ ಇರೋ ಹತ್ತಕ್ಕೂ ಹೆಚ್ಚು ಗುಡಿಸಲುಗಳನ್ನು ತೆರವು ಮಾಡಿದ್ದರು. 

ಸೂರು ಕಳೆದುಕೊಂಡ ಬಡವರು ಬದುಕನ್ನು ಕಳೆದುಕೊಂಡು ಬಿದಿಗೆ ಬಿದ್ದಿದ್ದರು. ಅಳಿದುಳಿದ ಗುಡಿಸಲು ಮುಂದೆಯೇ ವಾಸ ಮಾಡುತ್ತಿದ್ದರು. ಸಂತ್ರಸ್ತರ ಕಷ್ಟವನ್ನು ಅರಿತ ಶ್ರೀರಾಮುಲು ಸ್ಥಳಕ್ಕಾಗಮಿಸಿ ಹತ್ತು ಕುಟುಂಬದವರಿಗೆ ತಾತ್ಕಾಲಿಕ ಸೂರನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಸ್ಥಳದಲ್ಲಿ ನಾಲ್ಕು ತಾಸು ಮುಕ್ಕಾಂ ಹೂಡುವ ಮೂಲಕ ಗುಡಿಸಲು ನಿರ್ಮಾಣ ಮಾಡಿ ಹತ್ತು ಕುಟುಂಬ ಒಂದು ತಿಂಗಳಿಗಾಗುವಷ್ಟು ಆಹಾರ ಧಾನ್ಯವನ್ನು ನೀಡಿದ್ದಾರೆ. 

ಸ್ಥಳೀಯ ಪ್ರಭಾವಿ ನಾಯಕರ ಕುಮ್ಮಕ್ಕಿನಿಂದಾಗಿ ಕಳೆದ ನಲವತ್ತು ವರ್ಷದಿಂದ ವಾಸ ಮಾಡುತ್ತಿರುವ ಬಡವರ ಗುಡಿಸಲು ತೆರವು ಮಾಡಿದ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಅದೆಷ್ಟೋ ಜನರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ದೊಡ್ಡ ದೊಡ್ಡ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಅವರಿಗೊಂದು ಬಡವರಿಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಅಲ್ಲದೇ ನಿಯಮದ ಪ್ರಕಾರ ತೆರವು ಮಾಡಲಿ ಆದರೆ ತೆರವು ಮಾಡಿದವರಿಗೆ ಮತ್ತೊಂದು ಕಡೆ ಸೂರನ್ನು ನೀಡಬೇಕಲ್ಲವೇ ಎಂದು ಪ್ರಶ್ನಿಸಿದರು. ತಹಶಿಲ್ದಾರರ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಪೋನ್ ನಲ್ಲಿ ಮಾತನಾಡುವ ಮೂಲಕ ರಾಜ್ಯದಲ್ಲಿ ಡೆಂಗ್ಯೂ ತಾಂಡವವಾಡ್ತಿದೆ. ಮಳೆಗಾಲ ಇದೆ ಬೀದಿಗೆ ಬಿದ್ದ ಹತ್ತು ಕುಟುಂಬಲ್ಲಿ ಪುಟ್ಟ ಪುಟ್ಟ ಮಕ್ಕಳಿವೆ ಇಲ್ಲಿಯೂ ಡೆಂಗ್ಯೂ ಬಂದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. 

ಈ ವೇಳೆ ಬಿಜೆಪಿ ಕಾರ್ಪೋರೇಟರ್ ಹನುಂತಪ್ಪ, ಗುಡಿಗಂಟಿ ಹನುಮಂತ, ಗೋವಿಂದರಾಜು , ಗುರುಲಿಂಗನಗೌಡ, ಬಿಜೆಪಿ ಮುಖಂಡರಾದ ಸುಗುಣ, ನಾಗವೇಣಿ , ರೂಪ, ಇತರರು ಇದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ