Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಕಾರ್ಯನಿರತ ಪತ್ರಕರ್ತ ಸಂಘದ ಸಮವೇಶ

ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು.
ಸರ್ಕಾರ ಮತ್ತು ಜನರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು, ತಮ್ಮದೇ ಆದ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಸಾಮಾಜದ ಸ್ವಾಸ್ತ್ಯ ಕಾಪಾಡುತ್ತಿದ್ದಾರೆ ಎಂದು ಶ್ಲಾಸಿದರು.
ಕೆಯುಡಬ್ಲೂೃಜೆ ಹುಟ್ಟು ಹಾಕಿದ ಸಾಹಿತಿ ಮತ್ತು ಪತ್ರಕರ್ತ ಡಿ.ವಿ.ಗುಂಡಪ್ಪ ಅವರ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಮಾಹಿತಿ ತಿಳಿದುಕೊಂಡ ರಾಜ್ಯಪಾಲರು, ಅವರ ಆದರ್ಶದಲ್ಲಿ ಈಗಲೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ ಕೆಯುಡಬ್ಲೂೃಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕೇರಳ ಮತ್ತು ಕಾಸರಗೋಡು ಭಾಗಕ್ಕೆ ಭೇಟಿ ನೀಡಿದ ನೆನಪುಗಳನ್ನು ಮೆಲುಕು ಹಾಕಿದ ರಾಜ್ಯಪಾಲರು, ಗಡಿನಾಡು ಕಾಸರಗೋಡಿನ ಬಹುಭಾಷಾ ನೆಲದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮ ಅಪೂರ್ವವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.
ಕನ್ನಡಿಗರು ಹೆಚ್ಚಾಗಿರುವ ಮತ್ತು ಕನ್ನಡದ ಪತ್ರಿಕೆಗಳನ್ನು ಓದುವ ಜನರಿರುವ ಪ್ರದೇಶವಾಗಿರುವ ಕಾಸರಗೋಡು ಜನರು ಈಗಲೂ ಭಾವನಾತ್ಮಕವಾಗಿ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂದ ಹೊಂದಿದ್ದಾರೆ. ಆದ್ದರಿಂದ ಕಾಸರಗೋಡಿನಲ್ಲಿ ಕನ್ನಡ ಪತ್ರಕರ್ತರ ಬಳಗವೇ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದು ಕಾಸರಗೋಡು ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟಿ ವಿವರಿಸಿದರು.
ರಾಜ್ಯ ಘಟಕದ ಖಜಾಂಜಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಕಾಸರಗೋಡು ಘಟಕದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ. , ಖ್ಯಾತ ಗಾಯಕ, ಹವ್ಯಾಸಿ ಬರಹಗಾರ ಗೋ.ನಾ.ಸ್ವಾಮಿ ನಿಯೋಗದಲ್ಲಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ