Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗೃತಿ ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಕರೆ ಬಾಲ್ಯವಿವಾಹ ತಡೆಗೆ ವಿದ್ಯಾರ್ಥಿಗಳು ಸಹ ಕೈ ಜೋಡಿಸಬೇಕು





ಬಳ್ಳಾರಿ,ಆ.12

ಬಾಲ್ಯವಿವಾಹದ ದುಷ್ಪರಿಣಾಮಗಳು ಮತ್ತು ಮಕ್ಕಳ ರಕ್ಷಣೆ, ಬಾಲ್ಯವಿವಾಹ ತಡೆ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಬಾಲ್ಯವಿವಾಹ ತಡೆಯುವಲ್ಲಿ ಇಲಾಖೆಗಳ ಜೊತೆ ಕೈ ಜೋಡಿಸಿ ವಿದ್ಯಾರ್ಥಿಗಳು ತಮ್ಮ ಬೆಂಬಲ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಅಂದ್ರಾಳ್ ಪ್ರದೇಶದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ “ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಡ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬoದರೆ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಅಥವಾ ಪೋಲಿಸ್ ಸಹಾಯವಾಣಿ ಸಂಖ್ಯೆ-112 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ರತ್ನಾದೇವಿ ಅವರು ಮಾತನಾಡಿ, ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ತಿಳಿದುಕೊಂಡ ಬಾಲ್ಯವಿವಾಹ ತಡೆಗೆ ಮುಂದಾಗಬೇಕು. ತಮ್ಮ ಮನೆಯ ಸುತ್ತ-ಮುತ್ತಲಿನಲ್ಲಿ ಹಾಗೂ ತಮ್ಮ ಪೋಷಕರಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದರು.

ಮಕ್ಕಳ ರಕ್ಷಣಾಧಿಕಾರಿ ಅಸಾಂಸ್ಥಿಕ ಸೇವೆಯ ಚನ್ನಬಸಪ್ಪ ಪಾಟೀಲ್ ಮಾತನಾಡಿ, ಮಕ್ಕಳು ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಬಾಲಕಾರ್ಮಿಕ, ಭಿಕ್ಷಾಟನೆ, ಕಳ್ಳಸಾಗಾಣೆಗೆ ಒಳಗಾಗುತ್ತಿರುವುದು ಕಂಡುಬರುತ್ತಿದ್ದು, ಅಂತಹ ಮಕ್ಕಳನ್ನು ಗುರುತಿಸಿ ಅವರ ಹಕ್ಕುಗಳು ಉಲ್ಲಂಘನೆಯಾಗದAತೆ ಅವರ ಪಾಲನೆ, ಪೋಷಣೆ, ರಕ್ಷಣೆ ನೀಡುವ ಹಾಗೂ ಪುನರ್ವಸತಿ ಕಲ್ಪಿಸುವುದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಸಿಆರ್‌ಪಿ ಆರ್.ವಿಜಯಕುಮಾರ್ ಅವರು ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ ತಡೆ ಪ್ರತಿಜ್ಞಾವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ ರಾವ್, ಪೊಲೀಸ್ ಇಲಾಖೆಯ ನವದುರ್ಗಿ ತಂಡದ ವಿದ್ಯಾಬಾರ್ಕಿ, ಅಂಗನವಾಡಿ ಮೇಲ್ವಿಚಾರಕಿ ನಂದಿನಿ, ಸರ್ಕಾರಿ ಪ್ರಾಥಮಿಕ ಶಾಲೆಯ ಗಾಯಿತ್ರಿ, ತಿಪ್ಪೇಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ನಿಲೋಫಿಯಾ, ಚಂದ್ರಕಳಾ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ