Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಸಹಾಯಧನ; ಕೃಷಿ ಭಾಗ್ಯ ಯೋಜನೆ






 ಮಡಿಕೇರಿ ಮಳೆಯಾಶ್ರಿತ ಕೃಷಿ ನೀತಿ 2014 ರನ್ವಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.











ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿರುತ್ತದೆ. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸಹಾಯಧನ ರೈತರ ವರ್ಗವಾರು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ) ಮತ್ತು ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಗರಿಷ್ಠ ರೂ.50 ಸಾವಿರ) ಸಾಮಾನ್ಯ ರೈತರಿಗೆ ಶೇ.80, ಪ.ಜಾತಿ/ ಪ.ಪಂಗಡ ಶೇ.90, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿಗೆ ಸಾಮಾನ್ಯ ಶೇ.40, ಪ.ಜಾತಿ/ಪ.ಪಂಗಡಕ್ಕೆ ಶೇ.50, ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್ಸೆಟ್ಗೆ ಸಾಮಾನ್ಯ ಶೇ.50, ಪ.ಜಾತಿ/ಪ.ಪಂಗಡ ಶೇ.90 ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು, ಹನಿ) ನೀರಾವರಿ ಯೋಜನೆಯ ಒಗ್ಗೂಡಿಸುವಿಕೆಯಡಿ ಸಾಮಾನ್ಯ ಶೇ.90 ಮತ್ತು ಪ.ಜಾತಿ/ ಪ.ಪಂಗಡಕ್ಕೆ ಶೇ.90 ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ.

ಕೃಷಿ ಭಾಗ್ಯ ಪ್ಯಾಕೇಜ್ನಲ್ಲಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಸುವುದು. ಸಹಾಯಧನ ಪಾವತಿ ವಿಧಾನ: ಕ್ಷೇತ್ರ ಬದು ನಿರ್ಮಾಣ ಹಾಗೂ ಕೃಷಿಹೊಂಡ ಪೂರ್ಣಗೊಂಡ ನಂತರ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿಕೊಳ್ಳುವ ಬಗ್ಗೆ ರೈತರಿಂದ ದೃಢೀಕರಣ ಪತ್ರ ಪಡೆದುಕೊಂಡು, ಕ್ಷೇತ್ರ ಬದು ಹಾಗೂ ಕೃಷಿಹೊಂಡ ಘಟಕಗಳಿಗೆ ಸಂಬಂಧಿಸಿದ ಒಟ್ಟು ಸಹಾಯಧನದ ಶೇ.75 ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಕೃಷಿಭಾಗ್ಯ ಯೋಜನೆ ಪ್ಯಾಕೇಜ್ ಅಡಿ ಬರುವ ಆರು ಘಟಕಗಳ ಅನುಷ್ಠಾನ ಮತ್ತು ಕೆ-ಕಿಸಾನ್ ಮೊಬೈಲ್ ಆಪ್ನಲ್ಲಿ ದಾಖಲೀಕರಿಸಿದ ನಂತರ ಉಳಿಕೆ ಶೇ.25 ರಷ್ಟು ಸಹಾಯಧನದ ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕಸಬಾ 9108758654, ಶನಿವಾರಸಂತೆ 7760210610, ಕೊಡ್ಲಿಪೇಟೆ 8217723388, ಶಾಂತಳ್ಳಿ 8310828896, ಸುಂಟಿಕೊಪ್ಪ 9741963357, ಕುಶಾಲನಗರ 9380895275 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ/ ಕುಶಾಲನಗರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.





Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ