Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಸಹಾಯಧನ; ಕೃಷಿ ಭಾಗ್ಯ ಯೋಜನೆ






 ಮಡಿಕೇರಿ ಮಳೆಯಾಶ್ರಿತ ಕೃಷಿ ನೀತಿ 2014 ರನ್ವಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.











ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿರುತ್ತದೆ. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸಹಾಯಧನ ರೈತರ ವರ್ಗವಾರು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ) ಮತ್ತು ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಗರಿಷ್ಠ ರೂ.50 ಸಾವಿರ) ಸಾಮಾನ್ಯ ರೈತರಿಗೆ ಶೇ.80, ಪ.ಜಾತಿ/ ಪ.ಪಂಗಡ ಶೇ.90, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿಗೆ ಸಾಮಾನ್ಯ ಶೇ.40, ಪ.ಜಾತಿ/ಪ.ಪಂಗಡಕ್ಕೆ ಶೇ.50, ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್ಸೆಟ್ಗೆ ಸಾಮಾನ್ಯ ಶೇ.50, ಪ.ಜಾತಿ/ಪ.ಪಂಗಡ ಶೇ.90 ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು, ಹನಿ) ನೀರಾವರಿ ಯೋಜನೆಯ ಒಗ್ಗೂಡಿಸುವಿಕೆಯಡಿ ಸಾಮಾನ್ಯ ಶೇ.90 ಮತ್ತು ಪ.ಜಾತಿ/ ಪ.ಪಂಗಡಕ್ಕೆ ಶೇ.90 ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ.

ಕೃಷಿ ಭಾಗ್ಯ ಪ್ಯಾಕೇಜ್ನಲ್ಲಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಸುವುದು. ಸಹಾಯಧನ ಪಾವತಿ ವಿಧಾನ: ಕ್ಷೇತ್ರ ಬದು ನಿರ್ಮಾಣ ಹಾಗೂ ಕೃಷಿಹೊಂಡ ಪೂರ್ಣಗೊಂಡ ನಂತರ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿಕೊಳ್ಳುವ ಬಗ್ಗೆ ರೈತರಿಂದ ದೃಢೀಕರಣ ಪತ್ರ ಪಡೆದುಕೊಂಡು, ಕ್ಷೇತ್ರ ಬದು ಹಾಗೂ ಕೃಷಿಹೊಂಡ ಘಟಕಗಳಿಗೆ ಸಂಬಂಧಿಸಿದ ಒಟ್ಟು ಸಹಾಯಧನದ ಶೇ.75 ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಕೃಷಿಭಾಗ್ಯ ಯೋಜನೆ ಪ್ಯಾಕೇಜ್ ಅಡಿ ಬರುವ ಆರು ಘಟಕಗಳ ಅನುಷ್ಠಾನ ಮತ್ತು ಕೆ-ಕಿಸಾನ್ ಮೊಬೈಲ್ ಆಪ್ನಲ್ಲಿ ದಾಖಲೀಕರಿಸಿದ ನಂತರ ಉಳಿಕೆ ಶೇ.25 ರಷ್ಟು ಸಹಾಯಧನದ ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕಸಬಾ 9108758654, ಶನಿವಾರಸಂತೆ 7760210610, ಕೊಡ್ಲಿಪೇಟೆ 8217723388, ಶಾಂತಳ್ಳಿ 8310828896, ಸುಂಟಿಕೊಪ್ಪ 9741963357, ಕುಶಾಲನಗರ 9380895275 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ/ ಕುಶಾಲನಗರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.





Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು