Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆ: ಕುಸುಬೆ ಖರೀದಿ ಕೇಂದ್ರಗಳ ಪ್ರಾರಂಭ

ಕೊಪ್ಪಳ ಮಾರ್ಚ್ 21  ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕುಸುಬೆ ಉತ್ಪನ್ನ ಖರೀದಿಸುವ ಸಂಬAಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಪ್ರತಿ ಕ್ವಿಂಟಾಲ್‌ಗೆ ರೂ. 5940 ಗಳಂತೆ ಎಕರೆಗೆ 4 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್ ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಅಳವಂಡಿ, ಹಾಗೂ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ನೋಡಲ್ ಅಧಿಕಾರಿಗಳ ವಿವರ: ಕುಸುಬೆ ಖರೀದಿ ಕೇಂದ್ರ ಅಳವಂಡಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಕುಸುಬೆ ಖರೀದಿ ಕೇಂದ್ರ ಬೇವೂರಿಗೆ ಯಲಬುರ್ಗಾ(ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಪ್ರತಿ ಎಕರೆಗೆ ಗರಿಷ್ಠ 05 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕುಸುಬೆ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆಯನ್ನು ಮಾತ್ರ ಖರೀದಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕೊಪ್ಪಳದ ರಾಯಚೂರು ವಿಭಾಗೀಯ ಕಛೇರಿ ಎಣ್ಣೆ ಬೀಜ ಬೇಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಕೊಪ್ಪಳ ದೂ.ಸಂ: 9591812142, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ