Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾವು ಹಣ್ಣು ಮಾಗಿಸುವ ನೂತನ ತಂತ್ರಜ್ಞಾನ : ರೈತರಿಗೆ ವರದಾನ

ಕೊಪ್ಪಳ ಏಪ್ರಿಲ್27 ಕೊಪ್ಪಳ ಜಿಲ್ಲೆಯಾದ್ಯಂತ ಮಾವು ಬೆಳೆ ಈಗ ಕಟಾವಿಗೆ ಸಿದ್ದವಾಗಿದೆ. ರೈತರಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಿದ್ದು, ವೈಜ್ಞಾನಿಕವಾಗಿ ಹಣ್ಣು ಮಾಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿರುತ್ತಾರೆ.

ಮಾವು ಕಟಾವು ಮೊದಲು ರೈತರು ಮ್ಯಾಚುರಿಟಿ ಇಂಡೆಕ್ಸ್ ಅಂದರೆ, ಹಣ್ಣಿನ ಆಕಾರ, ಗಾತ್ರ ಮತ್ತು ಬಣ್ಣ ಆಧರಿಸಿ ಹಣ್ಣುಗಳು ಕಟಾವಿಗೆ ಬಂದಿದೆ, ಹಣ್ಣುಗಳ ಬುಜಗಳು ಎತ್ತರವಾಗಿ ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎನ್ನುವ ಸೂಚನೆ ಕುರಿತು ತಿಳಿದುಕೊಂಡಿರಬೇಕು. ಸಾಮಾನ್ಯವಾಗಿ ತಳಿಯನ್ನಾಧರಿಸಿ ಕಾಯಿ ಕಚ್ಚಿದ ನಂತರ 15 ರಿಂದ 16 ವಾರಗಳಲ್ಲಿ ಕಾಯಿಗಳು ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6 ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. ಕಟಾವು ಮಾಡುವಾಗ ಸುಮಾರು 1 ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು.

ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್ ವಿವರಣೆ: ಮಾವು ಮಾಗಿಸುವ ಟೆಂಟುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೇಸರಘಟ್ಟ, ಬೆಂಗಳೂರುನಲ್ಲಿ ಲಭ್ಯವಿರುತ್ತವೆ (ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವ ದೂ.ಸಂ: 080-28446815). ಈ ಟೆಂಟುಗಳು 200 ಮೈಕ್ರಾನ್ ಪ್ಲಾಸ್ಟಿಕ್‌ನಿಂದ ತಯಾರಿಸಲಾಗಿದ್ದು, ಸುಮಾರು 4 ಘನ ಮೀಟರ ಅಳತೆಯುಳ್ಳದ್ದಾಗಿದೆ ಮತ್ತು ಒಂದು ಟನ್‌ನಷ್ಟು ಹಣ್ಣುಗಳನ್ನು ಮಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಒಳಗಡೆ ಸುಮಾರು 750 ಕೆ.ಜಿ. ಹಣ್ಣುಗಳನ್ನು ಪ್ಲಾಸ್ಟಿಕ್ ಟ್ರೇಗಳಲ್ಲಿ ಅಳವಡಿಸಿ ನಂತರ 5 ಲೀಟರ್ ನೀರಿಗೆ 10 ಮಿ.ಲೀ. ಇಥ್ರೇಲ್ ಜೊತೆಗೆ 2 ಗ್ರಾಂ. ಸೋಡಿಯಂ ಹೈಡ್ರಾಕ್ಸೈಡ್ ಹರಳುಗಳನ್ನು ಮಿಶ್ರಣಮಾಡಿ ಈ ಟೆಂಟನಲ್ಲಿಟ್ಟು ತಕ್ಷಣ ಗಾಳಿಯಾಡದಂತೆ ಸೀಲ್ ಮಾಡಬೇಕು. ಇದರ ಜೊತೆಗೆ ಒಂದು ಬ್ಯಾಟರಿ ಚಾಲಿತ ಫ್ಯಾನ್‌ಇಡುವುದು ಹೆಚ್ಚು ಸೂಕ್ತ. ಈ ರೀತಿ ಉಪಚಾರ ಮಾಡಿದ 24 ಗಂಟೆಗಳ ನಂತರ ಟ್ರೇಗಳನ್ನು ಹೊರಗಡೆ ತೆಗೆದಿಡಬೇಕು. ಈ ರೀತಿ ಉಪಚರಿಸಿದ ಹಣ್ಣುಗಳು 4 ರಿಂದ 5 ದಿನಗಳಲ್ಲಿ ಏಕರೂಪವಾಗಿ ಪಕ್ವಗೊಳ್ಳುತ್ತವೆ. ಇಂತಹ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗುವ ಸಾಧ್ಯತೆ ಇದೆ.

ಈ ಟೆಂಟಗಳ ಬೆಲೆ ಸುಮಾರು ರೂ. 4,000 ಇದ್ದು, ಈಗಾಗಲೇ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನೆಲೊಗಲ್ ಗ್ರಾಮದ ಶ್ರೀನಿವಾಸ ಜಾಲಿಹಾಳ ರವರ ತೋಟದಲ್ಲಿ ಲಭ್ಯವಿದ್ದು, ಪ್ರಾತ್ಯಕ್ಷಿಕವಾಗಿ ರೈತರು ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ (ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಮೊ.ಸಂ. 8310431243). ಇಂತಹ ಹಣ್ಣುಗಳನ್ನು ಎ.ಬಿ.ಸಿ. ಎಂದು ವರ್ಗಿಕರಿಸಿ 45x 6 x 17 ಸೆಂ.ಮೀ. ಅಥವಾ 32x 27x 10 ಸೆಂ.ಮೀ. ಗಾತ್ರದ ಪೆಟ್ಟಿಗೆಗಳಲ್ಲಿ ಮೆತ್ತನೆಯ ಹಾಸು (ಪೇಪರ್ ತುಂಡು ಅಥವಾ ಕಟ್ಟಿಗೆ ಹೊಟ್ಟು) ಹಾಕಿ ದೂರದ ಊರುಗಳಿಗೆ ಸಾಗಿಸಬಹುದಾಗಿದೆ. ನಿಲೋಗಲ್ ಗ್ರಾಮದಲ್ಲಿ ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಮಾಡಿ ರೈತರಿಗೆ ತೋರಿಸಲಾಗಿದ್ದು, ಇದರ ಪ್ರಾಮುಖ್ಯತೆಯನ್ನು ಹೆಚ್ಚಿನ ರೈತರು ತಿಳಿದುಕೊಂಡು ಆದಾಯವನ್ನು ಹೆಚ್ಚಿಸಬೇಕೆಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ತಿಮ್ಮಣ್ಣ ಚವಡಿ ಅವರು ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು