Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024 ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತಗಳ ಮೊದಲ ಸುತ್ತಿನ ಎಣಿಕೆ ಆರಂಭವಾಗಿದೆ.

ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಮಯ 8.35 ಮಾಹಿತಿಯಂತೆ ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 687 ಮತಗಳನ್ನು ಪಡೆದಿದ್ದು, 611 ಮತಗಳನ್ನು ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳಲ್ಲಿ ಬಿಜೆಪಿ 2252, ಕಾಂಗ್ರೆಸ್ 2018, ಈಶ್ವರಪ್ಪ 260 ಮತಗಳನ್ನು ಪಡೆದಿದ್ದಾರೆ
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹಾವೇರಿಯಲ್ಲಿ ಪುತ್ರ ಕಾಂತೇಶ್ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡರು. ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಟೀಕೆ ಮಾಡಿದರು. ಅಂತಿಮವಾಗಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡರು.
ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134. ಕಾಂಗ್ರೆಸ್ ಗೀತಾ ಶಿವರಾಜ್ ಕುಮಾರ್ 15,771 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 1092 ಮತಗಳನ್ನು ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಬಿ. ವೈ. ರಾಘವೇಂದ್ರ ಇದ್ದು, 2ನೇ ಸ್ಥಾನದಲ್ಲಿ ಗೀತಾ ಶಿವರಾಜ್ಕುಮಾರ್ ಇದ್ದಾರೆ. ಈಶ್ವರಪ್ಪ 3ನೇ ಸ್ಥಾನದಲ್ಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಬಿ. ವೈ. ರಾಘವೇಂದ್ರ 33,780 ಮತ, ಗೀತಾ ಶಿವರಾಜ್ಕುಮಾರ್ 22,497 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 2145 ಮತಗಳನ್ನು ಪಡೆದಿದ್ದಾರೆ.




 
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು