Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಪ್ರಿಯ ಕರಾಟೆ ಪಟು"  ದಾಸರ ಸ್ವಾಮಿ" ಇನ್ನಿಲ್ಲ



 ವಿಜಯನಗರ : ವಿಜಯನಗರ  ಜುಲೈ,31: ಪಟ್ಟಣದ ಕರಾಟೆ ಪಟು ಪೈಂಟರ್ ದಾಸರ ಸ್ವಾಮಿ 30ವರ್ಷ, ರಸ್ತೆ ಅಪಘಾತದಲ್ಲಿ ಅಪಘಾತಕ್ಕಿಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಧರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮೃತರು ಕುಟುಂಬದ ಹಿರಿಯ ಮಗನಾಗಿ ಒಬ್ಬನೇ ಗಂಡು ಮಗನಾಗಿದ್ದನ. ಈತನಿಗೆ ಪತ್ನಿ ಮತ್ತು 3ವರ್ಷದ ಒಂದು ಹೆಣ್ಣು ಮಗು ಇದ್ದು. ಪತ್ನಿ 9 ತಿಂಗಳ ಗರ್ಭಿಣಿ,  ಮೃತರು ತಂದೆ, ತಾಯಿ ಇಬ್ಬರು ಸಹೋದರಿಯರನ್ನು ಹೊಂದಿದ್ದು ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.


ಪಟ್ಟಣದ 1ನೇ ವಾರ್ಡಿನ ಯುವಕ ದಾಸರ ಸ್ವಾಮಿ ಕರಾಟೆ ಪಟುವಾಗಿದ್ದನು, ಈತನು ವೃತ್ತಿಯಲ್ಲಿ ಮನೆ ಪೆಂಟರ್  ಕೆಲಸ ಮಾಡುತ್ತಿದ್ದನು.  ಜನರೊಂದಿಗೆ ಸದಾ ನಗುಮುಖದೊಂದಿಗೆ ವ್ಯವಹರಿಸುತ್ತ ಉತ್ತಮ ಜನ ಸಂಪರ್ಕಹೊಂದಿ ಅಪಾರ ಗೌರವ, ವಿಶ್ವಾಸ ಹೊಂದಿದ್ದನು. ಈತನ ಸಾವಿನ ಸುದ್ದಿ ತಿಳಿದು ವಾರ್ಡಿನ ಜನರಲ್ಲಿ ಆಕ್ರಂದನ ಮುಗಿಲು ಮುಟ್ಟಿತು.

ಮೃತ ದೇಹವನ್ನು ಮರಿಯಮ್ಮನಹಳ್ಳಿಯ ಸ್ವಗೃಹದ ಬಳಿ ತರುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡು ಸ್ನೇಹ ಬಳಗ, ಯುವಕರ, ಸ್ಥಳೀಯರ ಮತ್ತು ಕುಟುಂಬದವರ ಕಣ್ಣೀರ ಧಾರೆ ಏಳತಿರದಂತಿತ್ತು.


ಘಟನೆ : ಮೃತರು ಹೆಂಡತಿಯ ಸಂಬಂದಿಕರ ಊರು ಸಂಡೂರು ತಾಲ್ಲೂಕು ಅಗ್ರಹಾರ ಗ್ರಾಮಕ್ಕೆ ಹೋಗಬೇಕೆಂದು ದಿನಾಂಕ : 29.07.2025 ರಂದು ಸಂಜೆ 7.30 ರ ಸುಮಾರಿಗೆ ಮರಿಯಮ್ಮನಹಳ್ಳಿಯಿಂದ ಕೂಡ್ಲಿಗಿ ಮೂಲಕ ತನ್ನ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಎ.ಡಿ. ಗುಡ್ಡ ಗ್ರಾಮದ ಆದರ್ಶ ಶಾಲೆಯ ಸಮೀಪ ಇರುವ ರಸ್ತೆ ತಿರುವಿನಲ್ಲಿ ರಸ್ತೆಯ ಪಕ್ಕಕ್ಕೆ ಹೋಗಿ ಬೈಕ್ ನೊಂದಿಗೆ ಬಿದ್ದು. ತಲೆಯ ಹಿಂಬಾಗಕ್ಕೆ ತೀರ್ವವಾದ ಒಳಪೆಟ್ಟು ಮತ್ತು ರಕ್ತಗಾಯವಾಗಿ ಚಿಕಿತ್ಸೆಗಾಗಿ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆ, ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಒಮ್ಮೆ ಚಿಕಿತ್ಸೆ ಪಡೆದು ದಿನಾಂಕ : 30.7.2025 ರಂದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗುತ್ತಿರುವಾಗ  ರಾತ್ರಿ 9:45ರ ಗಂಟೆಗೆ ಮಾರ್ಗದ ಮಧ್ಯ ಮೃತಪಟ್ಟಿದ್ದಾಗಿ ಕುಟುಂಬಸ್ಥರಿಂದ ತಿಳಿದು ಬಂದಿದೆ. ಈ ಕುರಿತು ಕೂಡ್ಲಿಗಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ