Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿನಾಯಿಗಳು, ದನಗಳ‌ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು: ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಪಾತ್ರ ಮನವಿ


ರಾಯಚೂರು ಜುಲೈ 07 ರಾಯಚೂರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸುಮಾರು 24.75 ಲಕ್ಷ ರೂ ಮೊತ್ತದ ಟೆಂಡರ್ ಕರೆದು, ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸೂಕ್ತ ಕ್ರಮವಹಿಸಲಾಗುತ್ತಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಹೇಳಿದರು.
ಜುಲೈ 07ರ ಸೋಮವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ನೈರ್ಮಲ್ಯ ನಿರೀಕ್ಷಕರು ಹಾಗೂ ಮೇಲ್ವಿಚಾರಕರನ್ನು ಒಳಗೊಂಡಂತೆ ಸುಮಾರು 10 ತಂಡಗಳನ್ನು ರಚಿಸಿ ಪ್ರತಿನಿತ್ಯ ವಿವಿಧ ಬಡಾವಣೆಗಳಲ್ಲಿ ಗಸ್ತಿ ನಡೆಸಿ ಬೀದಿ ನಾಯಿಗಳನ್ನು ಬೇರೆಡೆ ಸಾಗಿಸಲು ಕ್ರಮ ವಹಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಸಂಸ್ಥೆಯೊಂದಕ್ಕೆ ಟೆಂಡರ್ ನೀಡಲಾಗಿದ್ದು, ಸುಮಾರು 1,375 ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಸುವ ಕಾರ್ಯ  ನಡೆಸಲಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ವಿಶೇಷ ಕ್ರಮ ವಹಿಸಲಾಗುತ್ತಿದೆ. ನಾಯಿ, ದನ ಹಾಗೂ ಹಂದಿಗಳ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ರಾಯಚೂರು ನಗರವನ್ನು ಸುಂದರ ಹಾಗೂ ಸ್ವಚ್ಛ ನಗರ ಮಾಡಲು ಸಾಧ್ಯವಿದೆ ಎಂದರು.
ಸಾರ್ವಜನಿಕರು ಘನತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಪಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಬಿಡಾಡಿ ದನಗಳನ್ನು ಹಿಡಿಯುವ ಕಾರ್ಯಾಚರಣೆಯು ಪ್ರಾರಂಭವಾಗಿದ್ದು, ಜನರು ಬಿಡಾಡಿ ದನಗಳನ್ನು ಮನಸಿಗೆ ಬಂದಂತೆ ರಸ್ತೆಯಲ್ಲಿ ಬಿಡಬಾರದು. ಈಗಾಗಲೆ 11 ಸಾವಿರ ದಂಢವಿದಿಸಿ ಕೆಲವು ದನಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಶಾಕೀರ್, ಬಿ.ವೈ.ವಾಲ್ಮೀಕಿ, ಪಶು ವೈದ್ಯಾಧಿಕಾರಿ ಬಸವರಾಜ ಪಾಟೀಲ್, ಪಾಲಿಕೆಯ ಪರಿಸರ ಅಭಿಯಂತರಾರದ ಜೈಪಾಲ ರೆಡ್ಡಿ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ