Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಡು ಕಟ್ಟುವಲ್ಲಿ ದೂರದೃಷ್ಟಿವುಳ್ಳ ಕೆಂಪೇಗೌಡರ ಕೊಡುಗೆ ಅಪಾರ:ಗುರುದತ್ತ ಹೆಗಡೆ

ಶಿವಮೊಗ್ಗ ಜೂ.27 

ಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೇ ಅಡಿಪಾಯ ಹಾಕಿದವರು ಕೆಂಪೇಗೌಡರು. ದೂರದೃಷ್ಟಿಯಿಂದ ನಾಡನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರದ ಸಂಸ್ಥಾಪಕರು. ಅತ್ಯಂತ ಮುಂದಾಲೋಚನೆಯಿಂದ ನಗರವನ್ನು ನಿರ್ಮಿಸಿದರು. 16 ನೇ ಶತಮಾನದಲ್ಲೇ ಬೆಂಗಳೂರಿನಲ್ಲಿ ಅನೇಕ ಕೆರೆಗಳು, ಮಾರುಕಟ್ಟೆಗಳನ್ನು ನಿರ್ಮಿಸಿದ್ದರು. ಅನೇಕ ಸಾಮಾಜಿಕ ಪಿಡುಗಗಳ ವಿರುದ್ದ ಕೆಲಸ ಮಾಡಿದ್ದರು. ಬೆಂಗಳೂರು ನಗರ ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ರಾಜ್ಯದ ಬೆನ್ನೆಲುಬಾಗಿದೆ. ಕೆಂಪೇಗೌಡರು ನಾಡು ಕಟ್ಟುವಲ್ಲಿ ನಮಗೆಲ್ಲ ಸ್ಪೂರ್ತಿದಾಯಕರಾಗಿದ್ದಾರೆ ಎಂದು ಹೇಳಿದರು.

ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮ ಕೇವಲ ಭಾಷಣಕ್ಕೆ ಸೀಮಿತ ಆಗಬಾರದು. ಎಲ್ಲರೂ ಅವರ ಜೀವನ ಚರಿತ್ರೆಯನ್ನು ಓದಿ ತಿಳಿದುಕೊಳ್ಳಬೇಕು ಎಂದರು.

ಕೆಂಪೇಗೌಡರ ಹೆಸರಿನಲ್ಲಿ ಉತ್ತಮ ಕೆಲಸಗಳು ಆಗಬೇಕೆಂಬ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವುದು ಹಾಗೂ ನಗರದಲ್ಲಿ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಿ ಪ್ರತಿದಿನ ಅವರನ್ನು ನೆನಪಿಸಿಕೊಳ್ಳುವಂತೆ ಆಗಬೇಕೆಂಬುದು ನಮ್ಮ ಆಶಯವಾಗಿದೆ.

ಎಲ್ಲ ವರ್ಗದವರಿಗೂ ಸಮಾನ ಹಕ್ಕು, ನ್ಯಾಯವನ್ನು ಒದಗಿಸಿದ ಮಹಾನ್ ನಾಯಕ ಕೆಂಪೇಗೌಡರು. ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದ್ದಾರೆ. ಕೆರೆಗಳು, ಮರಗಿಡಗಳು, ಮಾರುಕಟ್ಟೆ ಸೇರಿದಂತೆ ಬೆಂಗಳೂರಿನಲ್ಲಿ ಉತ್ತಮ ವಾತಾವರಣಕ್ಕೆ ಕಾರಣ ಅವರಿತ್ತ ಕೊಡುಗೆ ಎಂದು ನೆನೆದರು.

ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಗಿರಿಧರ್ ಕೆ.ವಿ ಕೆಂಪೇಗೌಡರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿ, ಈ ದೇಶದಲ್ಲಿ ಸಾವಿರಾರು ರಾಜರು ಅನೇಕ ನಗರಗಳನ್ನು ನಿರ್ಮಾಣ ಮಾಡಿದ್ದು, ಅವುಗಳು ನಶಿಸಿ ಹೋಗಿವೆ. ಆದರೆ ಇಂದಿಗೂ ಬೆಂಗಳೂರು ಅತ್ಯಂತ ವೈಭವದಿಂದ ಇದೆ ಎಂದರೆ ಕೆಂಪೇಗೌಡರ ದೂರದೃಷ್ಟಿ, ಆಲೋಚನೆ ಹೇಗೆ ಇತ್ತು ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಬೆಂಗಳೂರಿನಲ್ಲಿ ನೀರಿನ ವ್ಯವಸ್ಥೆಗೆಗಾಗಿ ನೂರಾರು ಕೆರೆಗಳು, ವ್ಯಾಪಾರ ಮಾರುಕಟ್ಟೆಗಳಾದ ಚಿಕ್ಕಪೇಟೆ, ದೊಡ್ಡಪೇಟೆ, ಬಂಗಾರಪೇಟೆ, ,ಕಾಟನ್ ಪೇಟೆ, ದೇವಾಲಯಗಳು, ಸೇರಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ನಗರವನ್ನು ನಿರ್ಮಾಣ ಮಾಡಿದರು ಎಂದರು.

ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಕಾಲೇಜುಗಳಲ್ಲಿ ಏರ್ಪಡಿಸಲಾಗಿದ್ದ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಹೆಚ್ ಜಿ.ಆದಿಮೂರ್ತಿ, ತಾಲೂಕು ಒಕ್ಕಲಿಗರ ಸಂಘ ಅಧ್ಯಕ್ಷ ಎ ಎಸ್ ಚಂದ್ರಕಾಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮೇಶ್, ಸಮಾಜದ ಮುಖಂಡರು ಹಾಜರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು