Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಥಳೀಯ ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’


ಬಳ್ಳಾರಿ,



ಜಿಲ್ಲೆಯ ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಂದು (ಜು.20) ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ “ತಿಂಗಳ ಸೊಬಗು” ಸಾಂಸ್ಕøತಿಕ ಕಾರ್ಯಕ್ರಮವು ಕಲಾ ಪ್ರೇಕ್ಷಕರ ಅಸ್ವಾದನೆಗೆ ಸಾಕ್ಷಿಯಾಯಿತು.

ಮೂರು ಸಾವಿರಕ್ಕೂ ಅಧಿಕ ಜಾದು ಕಾರ್ಯಕ್ರಮ ನೀಡಿದ, ಅಂತರಾಷ್ಟ್ರೀಯ ಜಾದು ಪ್ರಶಸ್ತಿಯ ಪುರಸ್ಕøತ, ಜಾದು ಮಾಂತ್ರಿಕ ರತ್ನ ಎಂದೇ ಪ್ರಸಿದ್ದಿಯಾದ ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಅವರ ಜಾನಪದ ಜಾದುವಿನ ಕೈ ಚಳಕಕ್ಕೆ ನೆರೆದಿದ್ದ ಪ್ರೇಕ್ಷಕರು ವಿಸ್ಮಯಗೊಳ್ಳುತ್ತಾ ಚಪ್ಪಾಳೆಯ ಸುರಿಮಳೆಗೈದರು.

ಇವರಿಗೆ ತಮ್ಮ ಧರ್ಮಪತ್ನಿ ನೇತ್ರಾವತಿ ಹೆಮ್ಮಾಡಿಯವರು ಜಾದುವಿಗೆ ಸಹಕಾರ ನೀಡಿದರು.

ಇನ್ನೂ ಸಿರುಗುಪ್ಪ ತಾಲ್ಲೂಕಿನ ಧಾತ್ರಿ ರಂಗ ಸಂಸ್ಥೆಯ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕಕ್ಕೆ ಕಲಾಭಿಮಾನಿಗಳು ಮನಸ್ಸು ಬಿಚ್ಚಿ ನಕ್ಕು ನಲಿದು, ಭರಪೂರ ಮನರಂಜನೆ ಪಡೆದರು.

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಜುಬೇರ್, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು