Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಥಳೀಯ ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’


ಬಳ್ಳಾರಿ,



ಜಿಲ್ಲೆಯ ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಂದು (ಜು.20) ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ “ತಿಂಗಳ ಸೊಬಗು” ಸಾಂಸ್ಕøತಿಕ ಕಾರ್ಯಕ್ರಮವು ಕಲಾ ಪ್ರೇಕ್ಷಕರ ಅಸ್ವಾದನೆಗೆ ಸಾಕ್ಷಿಯಾಯಿತು.

ಮೂರು ಸಾವಿರಕ್ಕೂ ಅಧಿಕ ಜಾದು ಕಾರ್ಯಕ್ರಮ ನೀಡಿದ, ಅಂತರಾಷ್ಟ್ರೀಯ ಜಾದು ಪ್ರಶಸ್ತಿಯ ಪುರಸ್ಕøತ, ಜಾದು ಮಾಂತ್ರಿಕ ರತ್ನ ಎಂದೇ ಪ್ರಸಿದ್ದಿಯಾದ ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಅವರ ಜಾನಪದ ಜಾದುವಿನ ಕೈ ಚಳಕಕ್ಕೆ ನೆರೆದಿದ್ದ ಪ್ರೇಕ್ಷಕರು ವಿಸ್ಮಯಗೊಳ್ಳುತ್ತಾ ಚಪ್ಪಾಳೆಯ ಸುರಿಮಳೆಗೈದರು.

ಇವರಿಗೆ ತಮ್ಮ ಧರ್ಮಪತ್ನಿ ನೇತ್ರಾವತಿ ಹೆಮ್ಮಾಡಿಯವರು ಜಾದುವಿಗೆ ಸಹಕಾರ ನೀಡಿದರು.

ಇನ್ನೂ ಸಿರುಗುಪ್ಪ ತಾಲ್ಲೂಕಿನ ಧಾತ್ರಿ ರಂಗ ಸಂಸ್ಥೆಯ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕಕ್ಕೆ ಕಲಾಭಿಮಾನಿಗಳು ಮನಸ್ಸು ಬಿಚ್ಚಿ ನಕ್ಕು ನಲಿದು, ಭರಪೂರ ಮನರಂಜನೆ ಪಡೆದರು.

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಜುಬೇರ್, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ