Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಈ ಪಾದ ಪುಣ್ಯ ಪಾದ" ಚಲನಚಿತ್ರ ಟೈಟಲ್ ಬಿಡುಗಡೆ

ಬೆಂಗಳೂರ :ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಕನ್ನಡ ಚಲನಚಿತ್ರ “ಈ ಪಾದ ಪುಣ್ಯ ಪಾದ" ಎಂಬ ಚಲನಚಿತ್ರದ ಟೈಟಲನ್ನು ಖ್ಯಾತ ಚಲನಚಿತ್ರ ನಿರ್ದೇಶಕರಾದ "ಶಶಾಂಕ್" ರವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಕೋರಿದರು.
ದಾರಿ ಯಾವುದಯ್ಯಾ ವೈಕುಂಠಕೆ, ಬ್ರಹ್ಮ ಕಮಲ, ತಾರಿಣಿ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಹಲವಾರು ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡು ಸೈ ಎನಿಸಿಕೊಂಡಿರುವ "ಸಿದ್ದು ಪೂರ್ಣಚಂದ್ರ" ರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ.ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ಧಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರವಾಗಿದೆ.
ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ, ಇನ್ನೂ ಮುಂತಾದವರ ತಾರಾಗಣವಿದೆ. ಛಾಯಾಗ್ರಹಣ ರಾಜು ಹೆಮ್ಮಿಗೆಪುರ, ಸಂಗೀತ ಅನಂತ್ ಆರ್ಯನ್, ಸಂಕಲನ ದೀಪಕ್, ವಸ್ತ್ರ ವಿನ್ಯಾಸ ನಾಗರತ್ನ ಕೆ ಹೆಚ್, ಪ್ರೊಡಕ್ಷನ್ ಡಿಸೈನ್ ದಿಲೀಪ್ ಹೆಚ್ ಆರ್, ಕಾರ್ಯಕಾರಿ ನಿರ್ಮಾಪಕರು ಪುಟ್ಟರಾಜು ಎ ಕೆ ಆಲಗೌಡನ ಹಳ್ಳಿ ಮತ್ತು ಕಲಾ ನಿರ್ದೇಶನ ಬಸವರಾಜ್ ಆಚಾರ್ ,ಪಿಆರ್‌ಓ ಸುಧೀಂದ್ರ ವೆಂಕಟೇಶ,ಡಾ.ಪ್ರಭು ಗಂಜಿಹಾಳ,ಡಾ.ವೀರೇಶ ಹಂಡಿಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣವಾಗುತ್ತದೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ