Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನ





ಬಳ್ಳಾರಿ,ಮೇ 31



ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ, ಹಾಗೂ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಅಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ಕಮಲಾಪುರದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಜೂ.02 ರಿಂದ ಅರ್ಜಿ ಪಡೆದು, ಭರ್ತಿ ಮಾಡಿ ಜೂ.9 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವರ್ಷದೊಳಗಿರಬೇಕು.



*ತರಬೇತಿಯ ವಿವರ:*



ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ (ಪುಡ್ ಅಂಡ್ ಬೆವರೇಜ್ ಸರ್ವೀಸ್ ಸ್ಟೇವರ್ಡ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ 10 ನೇ ತರಗತಿ ಉತ್ತಿರ್ಣರಾಗಿರಬೇಕು.



ಬಹು ತಿನಿಸು ಕುಕ್ (ಮಲ್ಟಿ ಕ್ಯೂಸೆನ್ ಕುಕ್) : ತರಬೇತಿಯ ಕಾಲಾವಧಿ 5 ತಿಂಗಳು ಹಾಗೂ 8 ನೇ ತರಗತಿ ಉತ್ತೀರ್ಣರಾಗಿರಬೇಕು.



ಕೊಠಡಿ ಪರಿಚಾರಕ (ರೂಂ ಅಟೆಂಡಂಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.



ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ಖಾತರಿಯಾಗಿದೆ.



ತರಬೇತಿ ಪಡೆಯುವ ವೇಳೆ ರೂ.2000/- ರಂತೆ ಮಾಹೆಯಾನ ಸ್ಟೈಫಂಡ್ ನೀಡಲಾಗುವುದು.



ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಸಮವಸ್ತ್ರ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ತರಬೇತಿ ಸಹ ನೀಡಲಾಗುವುದು.



ಐಹೆಚ್‌ಎಂ ಬೆಂಗಳೂರು ಮತ್ತು ಎಫ್‌ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರಗಳನ್ನು ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.



ಹೆಚ್ಚಿನ ಮಾಹಿತಿಗಾಗಿ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ