Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಕಾರಾಮ್ ಗೆಲುವು ಸಚಿವ ನಾಗೇಂದ್ರ ಅಭಿಮಾನಿಗಳಿಂದ ಸಂಭ್ರಮಾಚರಣೆ

ಬಳ್ಳಾರಿ: ಜೂ 05 ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇ ತುಕಾರಾಮ್ ಗೆಲುವು ಸಾಧಿಸಿದ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಮತ್ತು ಸಚಿವೆ ನಾಗೇಂದ್ರ ರವರ ಕಟ್ಟಾ ಬೆಂಬಲಿಗ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದ ಉಮೇಶ್ ಗೌಡ ಮತ್ತು ಅವರ ಸ್ನೇಹಿತರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಗ್ರಾಮದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. 

ಈ ಸಂದರ್ಭದಲ್ಲಿ ಉಮೇಶ್ ಗೌಡ ಮಾತನಾಡಿ, ಈ ತುಕಾರಾಮ್ ನಾಲ್ಕು ಭಾರಿ ಶಾಸಕರಾಗಿ ಒಂದು ಭಾರಿ ಸಚಿವರಾಗಿ ಅತ್ಯಂತ ಅನುಭವಿ ರಾಜಕಾರಿಣಿಯಾಗಿದ್ದು ಇವರು ಬಳ್ಳಾರಿ ಜಿಲ್ಲೆಯಲ್ಲಿ ಮತ್ತು ಸಂಡೂರು ತನ್ನ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸರ್ಕಾರದ ಮತ್ತು ಪಕ್ಷದ ಯೋಜನೆಗಳನ್ನು ಜನರಿಗೆ ಸಕಾಲದಲ್ಲಿ ತಲುಪಿಸಲು ಸಹಕಾರಿಯಾಗಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿದ್ದರು. ಈ ಭಾರಿ ಕೂಡ ಬಿ.ಜೆ.ಪಿ ಪಕ್ಷವನ್ನು ಛಿದ್ರ ಮಾಡಿ ಮತ್ತೊಮ್ಮೆ ಕಾಂಗ್ರೆಸ್ ಭದ್ರಕೋಟೆ ಎಂಬ ಅಸ್ಥಿತ್ವವನ್ನು ಉಳಿಸಿಕೊಂಡಿದೆ. ಅಲ್ಲದೆ ರಾಜ್ಯದ ಪಂಚ ಗ್ಯಾರಂಟಿಗಳು ಸಮರ್ಪಕ ಜಾರಿಯಾಗಿದ್ದು ಲೋಕಸಭಾ ಚುನಾವಣೆಯ ಗೆಲುವಿಗೆ ಶ್ರೀರಕ್ಷೆಯಾಗಿದೆ. ಈ ಅವಳಿ ಜಿಲ್ಲೆಯ ಜನತೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಕೈಹಿಡಿದಿದ್ದಾರೆ ಇನ್ನು ಮುಂದೆ ಕೂಡ ತುಕಾರಾಮ್ ಮತ್ತು ಸಚಿವ ಬಿ ನಾಗೇಂದ್ರ ರವರು ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಜಿ ದೇವರಾಜ, ಮಾಜಿ ಸದಸ್ಯರಾದ ಹೇಮಂತ್, ಲಿಂಗಾರೆಡ್ಡಿ, ಸುಂಕಪ್ಪ, ಗ್ರಾಮದ ಮುಖಂಡ ಕ್ಯಾಂಡಿಡೆಟ್ ಬಸಪ್ಪ, ಸಿದ್ದರಾಮಪ್ಪ, ಸುನಿಲ್, ಸುಂಕಣ್ಣ, ಎಂ.ಡಿ ಹೊನ್ನೂರಸ್ವಾಮಿ, ರೇವಣ್ಣ ಸಿದ್ದಪ್ಪ, ನಾಗದೇವ, ಗಂಗಾಧರ, ಕೆ ಆಂಜನೇಯ, ಹೊನ್ನೂರಸ್ವಾಮಿ, ಕರಿಬಸವ, ವೀರೇಶ್ ಸೇರಿದಂತೆ ಇತರರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ