Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿಭಾರತ ಕಾರ್ಯಕ್ರಮ ಲಾಂಛನ ಅನಾವರಣ


ಬೆಳಗಾವಿ ಡಿ.9:



ಬೆಳಗಾವಿ  ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ " ಗಾಂಧಿಭಾರತ" ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ

ಅನಾವರಣಗೊಳಿಸಿದರು.



ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು,ಹೋರಾಟ,ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ,ಸತ್ಯ,ಅಹಿಂಸೆ,ಆರ್ಥಿಕ ಚಿಂತನೆಗಳು,ಸ್ವರಾಜ್,ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.



ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು,ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್,ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಬಸವರಾಜ ರಾಯರೆಡ್ಡಿ,ಚನ್ನರಾಜ ಹಟ್ಟಿಹೊಳಿ,ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ