Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿಗಾಗಿ ನಗರಾಭಿವೃದ್ಧಿ ಹೋರಾಟ ಸಮಿತಿ ಪ್ರತಿಭಟನೆ..


ಸಿಂಧನೂರು: ನಗರದ ಬಸವೇಶ್ವರ ವೃತ್ತದಿಂದ ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ನಗರಾಭಿವೃದ್ಧಿ ಹೋರಾಟ ಸಮಿತಿ  ನಗರಸಭೆ ಕಛೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ಮಾಡಿ,ಶಾಸಕ ಹಾಗೂ ಪೌರಾಯುಕ್ತರ ವಿರುದ್ ಘೋಷಣೆ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು..


ನಗರಸಭೆ ಆಡಳಿತ ಮಂಡಳಿ, ಪೌರಾಯುಕ್ತರು ಮತ್ತು ಶಾಸಕರ ದಿವ್ಯ ನಿರ್ಲಕ್ಷತನದಿಂದ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.  ಇವರು ಅಚ್ಚುಕಟ್ಟಾಗಿ ಕಾರ್ಯ ನಿರ್ವಿಸಿದ್ದರೆ ನಗರದ ಜನತೆ ಕುಡಿಯುವ ನೀರಿಗಾಗಿ ಹಲೆದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಯಶಸ್ವಿಯಾಗಿ ಸಮಿತಿಯ ಮುಖಂಡರು   ಪೊಲೀಸ್ ಬ್ಯಾರಿಕೆಟ್ ಮುರಿದು ನಗರಸಭೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಭಾಗಷಃ ಯಶಸ್ವಿಯಾದರು. 


ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಮತ್ತು ನಗರಸಭೆಯ ಪೌರಾಯುಕ್ತರು ಆಗಮಿಸಿ ನೀರಿನ ಸಮಸ್ಯೆ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ನಗರ ಅಭಿವೃದ್ಧಿ ಹೋರಾಟ ಸಮಿತಿಯ ಮುಖಂಡರು ಪಟ್ಟು ಹಿಡಿದರು. ನಂತರ ಕೇವಲ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು. ಈ ಹೋರಾಟ ನಗರ ಅಭಿವೃದ್ಧಿ ಹೋರಾಟಗಾರರಿಗೆ ಹುಮ್ಮಸ್ಸು ಹೆಚ್ಚಾಗಿದ್ದು ಮುಂದಿನ ದಿನಮಾನಗಳಲ್ಲಿ ಇದು ಯಾವ ರೀತಿ ರೂಪ ಪಡೆದು ನೀರಿನ ಸಮಸ್ಯೆ ನಿವಾರಣೆ  ಆಗುತ್ತದೆ ಎಂದು ಕಾದು ನೋಡಬೇಕು. ಈ ಸಂಧರ್ಭದಲ್ಲಿ ಮುಖಂಡರಾದ ಡಿ.ಹೆಚ್ ಕಂಬಳಿ, ಎಸ್ ದೇವೇಂದ್ರಗೌಡ, ಡಾ.ಶಿವರಾಜ್, ಸರಸ್ವತಿ ಪಾಟೀಲ್, ನಾಗರಾಜ ಪೂಜಾರ್,ದೌಲಸಾಬ್ ದೊಡ್ಡಮನಿ,ಬಸವರಾಜ್ ಬಾದರ್ಲಿ, ಶಂಕರ ಗುರಿಕಾರ್ ಸೇರಿದಂತೆ ಅನೇಕರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ