Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೂರಿಯಾ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ: ಜಂಟಿ ಕೃಷಿ ನಿರ್ದೇಶಕರು



ಕೊಪ್ಪಳ ಜುಲೈ 24 : ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜುಲೈವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 33,459 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 4,702 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನು ಲಭ್ಯವಿದೆ.

ಈ ವಾರ National Fertilizers Limited (NFL), Coromandel International Limited (CIL) ಹಾಗೂ Kribhco Fertilizer Limited ಕಡೆಯಿಂದ ಒಟ್ಟು 3,136.73 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಪೂರೈಕೆ ಮಾಡಲಾಗಿದೆ. ಈ ಪೂರೈಕೆಯಿಂದ ಕೊಪ್ಪಳ ತಾಲ್ಲೂಕಿಗೆ 629.03 ಟನ್, ಕುಷ್ಟಗಿ ತಾಲ್ಲೂಕಿಗೆ 269.95 ಟನ್, ಯಲಬುರ್ಗಾ ತಾಲ್ಲೂಕಿಗೆ 421.70 ಟನ್, ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಭಾಗಗಳಿಗೆ 1,816.05 ಟನ್ ರಸಗೊಬ್ಬರವನ್ನು ಪೂರೈಸಲಾಗಿದೆ. ಯೂರಿಯಾ ರಸಗೊಬ್ಬರದ ಪೂರೈಕೆ ಹಂತ ಹಂತವಾಗಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ 5,000 ಮೆಟ್ರಿಕ್ ಟನ್ SPIC, MFL ಮತ್ತು RCF ಕಂಪನಿಗಳಿಂದ ಇನ್ನೂ ಹೆಚ್ಚಿನ ಪೂರೈಕೆ ನಿರೀಕ್ಷಿಸಲಾಗಿದೆ.

ರೈತರು ಯಾವುದೇ ಆತಂಕಕ್ಕೊಳಗಾಗದೇ, ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆಯೂ ಸಾಧ್ಯ. ಅಲ್ಲದೇ, ರೈತರು ರಸಗೊಬ್ಬರ ಹಾಗೂ ಇತರೆ ಕೃಷಿ ಪರಿಕರಗಳನ್ನು ಖರೀದಿಸುವಾಗ ಮಾರಾಟಗಾರರು ಖರೀದಿ ಬಿಲ್ ನೀಡದೇ ಇರುವುದು ಅಥವಾ ಮೌಲ್ಯಕ್ಕಿಂತ ಹೆಚ್ಚು ದರದಲ್ಲಿ ಮಾರಾಟ ಮಾಡುವುದನ್ನು ಕಂಡುಬAದಲ್ಲಿ, ತಕ್ಷಣವೇ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ, ಕೊಪ್ಪಳ: 8277922143, ನಾಗರಾಜ ಕಾತರಕಿ, ಕುಷ್ಟಗಿ: 8277922109, ಪ್ರಮೋದ ತುಂಬಾಳ, ಯಲಬುರ್ಗಾ: 8277922107, ಸಂತೋಷ ಪಟ್ಟದಕಲ್, ಗಂಗಾವತಿ: 8277922106, ಸುನೀಲ್ ಕುಮಾರ ಎಂ. ಟಿ., (ಜಾರಿದಳ) ಕೊಪ್ಪಳ: 8277932117 ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು