Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವನ ಸರ್ವತೋಮುಖ ಬೆಳವಣಿಗೆಗೆ ವಚನ ಸಾಹಿತ್ಯ ಅಗತ್ಯ .

ಬಳ್ಳಾರಿ: ಮಾನವನ ಸರ್ವತೋಮುಖ ಬೆಳವಣಿಗೆಗೆ ವಚನ ಸಾಹಿತ್ಯ ಅಗತ್ಯ ಎಂದು ಉಪನ್ಯಾಸಕ ಶರಣಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಸವೇಶ್ವರ ನಗರದ ರಾಷ್ಟ್ರೀಯ ಬಸವದಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕವು ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 12ನೇ ಶತಮಾನದ ವಚನಗಳು ಸಾಮಾಜಿಕ ಚಳುವಳಿ ಮಾಡಲು ಪ್ರೋತ್ಸಾಹ ನೀಡುತ್ತವೆ. ಸರ್ವಕಾಲಿಕ, ವಚನಗಳು ಅನರ್ಗ್ಯ ರತ್ನಗಳಿದ್ದಂತೆ ಲೋಕದ ಡೊಂಕನ್ನು ತಿದ್ದುವುದರ ಜೊತೆಗೆ ಮನುಷ್ಯನ ಡೊಂಕನ್ನು ತಿದ್ದಲು ಸಹಕಾರಿಯಾಗಿವೆ. ಸೌಜನ್ಯ ,ತಾಳ್ಮೆ ದೊಡ್ಡ ಆಸ್ತಿಗಳು. ತಮ್ಮ ಜೀವನದಲ್ಲಿ ನಿಸ್ವಾರ್ಥ ಮನೋಭಾವಗಳನ್ನು ರೂಢಿಸ್ಕೊಳ್ಳಬೇಕು ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ವಕೀಲರು ಹಾಗೂ ಯೋಗ ಸಾಧಕರಾದ ಶ್ರೀಯುತ ಕಣೆಕಲ್ ಎರ್ರಿಸ್ವಾಮಿ ರವರು ಉದ್ಘಾಟಿಸಿ ತಮ್ಮ ಉದ್ಘಾಟನಾ ನುಡಿಯಲ್ಲಿ ವಚನ ಸಾಹಿತ್ಯಗಳು ಜನರ ಬದುಕನ್ನು ಕಟ್ಟಿಕೊಡುತ್ತವೆ,
ಜೊತೆಗೆ ಸಮಾಜಿಕ ಕಳಕಳಿ, ಸಾಮಾಜಿಕ ಚಿಂತನೆಯನ್ನು ಮಾಡುವಲ್ಲಿ ಸಹಕಾರಿಯಾಗುತ್ತವೆ ಎಂದು ನುಡಿದರು

ರಾಷ್ಟ್ರೀಯ ಬಸವದಳದ ರಾಜ್ಯ  ಉಪಾಧ್ಯಕ್ಷರಾದ    ಕೆ ವಿ ರವಿಶಂಕರ್ ಮಾತನಾಡಿ      ಬಸವಣ್ಣನವರ ಅನುಭವ ಮಂಟಪದಲ್ಲಿ ಚರ್ಚೆಯಾಗುತ್ತಿದ್ದ ವಿಷಯಗಳು    ಇಂದಿನ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದರು.
ಉಪಸ್ಥಿತರಿದ್ದರು ಜಿಲನ್ ಬಾಷಾ, ತಾಲೂಕು ಘಟಕದ ಅಧ್ಯಕ್ಷರಾದ ನಾಗರೆಡ್ಡಿ ಕೆ ವಿ , ಅಖಂಡ ಬಳ್ಳಾರಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾಕ್ಟರ್ ನಿಷ್ಟಿ ರುದ್ರಪ್ಪ ರವರು ಪ್ರಾಸ್ತಾವಿಕ ನುಡಿದರು.

ಮುಖ್ಯ ಅತಿಥಿಗಳಾಗಿ  ವರದಿಗಾರರಾದ ಎಸ್ ಕಿನ್ನೂರೇಶ್ವ
ಪರಿಷತ್ತಿನ ಅಧ್ಯಕ್ಷರಾದ ಎಚ್ ಹಂಪನ ಗೌಡ್ರು
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಎನ್ ಡಿ ವೆಂಕಮ್ಮ, ಅಜಯ್ ಬಣಕಾರ್, ಅಬ್ದುಲ್ ಐ, ಪ್ರಭು ಸರ್, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರು, ಸಾಹಿತ್ಯ ಅಭಿಮಾನಿಗಳು ಉಪಸ್ಥಿತರಿದ್ದರು. ಅತಿಥಿಗಳಿಗೆ ಮತ್ತು ಉಪನ್ಯಾಸ ನೀಡಿದ ಶರಣಪ್ಪ ರವರಿಗೆ ಗೌರವಿಸಲಾಯಿತು. ಚಾಂದ್ ಪಾಷಾ ತಾಲೂಕು ಅಧ್ಯಕ್ಷರಾದ ನಾಗರೆಡ್ಡಿ ಕೆ ವಿ ಉಪಸ್ಥಿತರಿದ್ದರು..​

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ