Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಳುವರಿ ಕುಂಠಿತ,ಗಗನಕ್ಕೇರಿದ ತರಕಾರಿ ಬೆಲೆ 

ಕವಿತಾಳ: ಮಾರುಕಟ್ಟೆಯಲ್ಲಿ ತರಕಾರಿ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತರಕಾರಿ ಕೊಳ್ಳಲು ಯೋಚಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಹೌದು! ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿರುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹೆಚ್ಚಾದ ಮಳೆಯಿಂದಾಗಿ ತರಕಾರಿ ಕೊಳೆತು, ಇಳುವರಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಉತ್ಪಾದನೆ ಕುಂಠಿತವಾಗಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ.


ತಿಂಗಳ ಹಿಂದೆ 1ಕೆ.ಜಿ. ಟೊಮ್ಯಾಟೋ 20 ರಿಂದ 30 ರೂ.ಗೆ ಮಾರಾಟವಾಗಿತ್ತು. ಈಗ ಪ್ರತಿ ಕೆಜಿ ರೂ.100 ಗೆ ಮಾರಾಟವಾಗುತ್ತಿದೆ. ಅದೇ ರೀತಿ ಬೀನ್ಸ್ ರೂ.200, ಆಲೂಗಡ್ಡೆ ರೂ.80, ಹಿರೇಕಾಯಿ ರೂ100, ಸೌತೆಕಾಯಿ ರೂ.100, ಬೆಂಡೆಕಾಯಿ ರೂ.80, ಬದನೆಕಾಯಿ 80, ಕೊತ್ತಂಬರಿ,ಮೆಂತೆ, ಪುಂಡಿ ಪಲ್ಯ,ಪಾಲಕ್ ರೂ.10 ಗೆ ಒಂದು ಕಟ್ಟು ಮಾರಾಟವಾಗುತ್ತಿದೆ.


ಬೇರೆ ಜಿಲ್ಲೆಗಳಿಂದ ಮಾರುಕಟ್ಟೆಗೆ ಬರುತ್ತಿದ್ದ ತರಕಾರಿ ಕಳೆದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ. ಸ್ಥಳೀಯ ಜಮೀನಿನಲ್ಲಿ ಬೆಳೆದ ತರಕಾರಿಗಳು ಸದ್ಯಕ್ಕೆ ಬಂದಿಲ್ಲ. ಹೀಗಾಗಿ ಅಲ್ಪ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬರುವುದರಿಂದ ಬೆಲೆಯಲ್ಲಿ ಬಾರೀ ವ್ಯತ್ಯಾಸವಾಗಿದೆ.


ತರಕಾರಿ ಬೆಲೆಗಳು ಗಗನಕ್ಕೇರಿದ್ದು, ಬಡವರು ಖರೀದಿಸಲಾಗದಂತಹ ಪರಿಸ್ಥಿತಿ ಇದೆ. ದುಡಿಯೋ ಹಣ ತರಕಾರಿ ಖರೀದಿಗೂ ಸಾಲುತ್ತಿಲ್ಲ. ವಾರದ ಸಂತೆಯಲ್ಲಿ ರೂ.200 ರಿಂದ 300 ರಲ್ಲಿ ತರಕಾರಿ ಖರೀದಿ ಮಾಡುತ್ತಿದ್ದೆವು. ಈಗ ರೂ.600 ಆದರೂ ಸಾಲುತ್ತಿಲ್ಲ ಎಂದು ಸ್ಥಳೀಯರಾದ ಸಂಗಮೇಶ ಸಾಲ್ಮನಿ ಹೇಳಿದರು.


ಸ್ಥಳೀಯ ಜಮೀನುಗಳಲ್ಲಿ ಬೆಳೆದ 

ತರಕಾರಿ ಬರುವರೆಗೂ,ತರಕಾರಿ ದರ ಇಳಿಕೆಯಾಗುವ ಲಕ್ಷಣ ಇಲ್ಲ.

ಅನಿವಾರ್ಯವಾಗಿ ನಾವು ಬೇರೆ ಜಿಲ್ಲೆಗಳಿಂದ ತರಕಾರಿಗಳನ್ನು ತರಿಸಿ ಮಾರಾಟ ಮಾಡುತ್ತಿದ್ದೇವೆ. ಬೆಲೆ ಏರಿಕೆಯ ಜೊತೆಗೆ ಉತ್ತಮ ಗುಣಮಟ್ಟದ ತರಕಾರಿಗಳು ಸಿಗುತ್ತಿಲ್ಲ ಎಂದು ತರಕಾರಿ ವ್ಯಾಪಾರಿ ವೀರೇಶ್ ಹೇಳಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ