Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತಡಮುಕ್ತ ಜೀವನ ನಡೆಸುವ ಮಾರ್ಗೋಪಾಯದಲ್ಲಿ ನಡೆಯಿರಿ

ದಾವಣಗೆರೆ ಜು.09 ಇತ್ತೀಚಿನ ದಿನದಲ್ಲಿ ಒತ್ತಡದ ಜೀವನದಿಂದ ಮಾನಸಿಕ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಒತ್ತಡ ಮುಕ್ತ ಜೀವನವನ್ನು ನಡೆಸುವ ಮಾರ್ಗೋಪಾಯಗಳನ್ನು ತಿಳಿದುಕೊಂಡು ಮುನ್ನಡೆದರೆ ಮಾತ್ರ ಪ್ರತಿಯೊಬ್ಬರೂ ಮಾನಸಿಕ ಆರೋಗ್ಯವಂತರಾಗಿರಲು ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಪಟಗೆ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವತಿಯಿಂದ ನಗರದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಗರ ಪ್ರದೇಶದ ವ್ಯಾಪ್ತಿಗೆ ಬರುವ ಆಶಾ ಕಾರ್ಯಕರ್ತೆಯರಿಗೆ ಮಾನಸಿಕ ಆರೋಗ್ಯದ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಕೇಂದ್ರದ ಪೋ ಸ್ಟರ್ ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತಾನಾಡಿದರು.

ಯಾರಲ್ಲಿ ಮಾನಸಿಕ ಕಿರಿಕಿರಿ, ನಿವೇದನೆ, ಚಿಂತೆ, ವ್ಯಥೆ, ನಕಾರಾತ್ಮಕ ಆಲೋಚನೆ, ಇರುತ್ತದೆಯೋ ಅಂಥವರು ಮಾನಸಿಕ ಆರೋಗ್ಯ ಸಹಾಯವಾಣಿ 14416 ಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆಯಬಹುದಾಗಿದೆ. ಹಾಗೂ ಪ್ರತಿಯೊಂದು ಸರ್ವೇಯಲ್ಲಿ ಮಾನಸಿಕ ಅಸ್ವಸ್ಥರನ್ನು ಗುರುತಿಸುವ ಕೆಲಸವಾಗಲಿ ಮತ್ತು ಮಾನಸಿಕ ಅಸ್ವಸ್ಥರನ್ನು ಮುಖ್ಯವಾಹಿನಿಗೆ ತರುವಲ್ಲಿ ಆಶಾಕಾರ್ಯಕರ್ತೆಯರ ಪಾತ್ರ ಮುಖ್ಯ ಎಂದರು.

ಮಾನಸಿಕ ಖಾಯಿಲೆಯೂ ಮೆದುಳಿನಲ್ಲಾಗುವ ರಾಸಾಯನಿಕ ಬದಲಾವಣೆ, ಅನುವಂಶೀಯತೆ, ಒತ್ತಡದಿಂದ ಬರುವಂತದಾಗಿದೆ. ಯಾವುದೇ ದೆವ್ವ ಭೂತ ಮಾಟ ಮಂತ್ರ ಪೂರ್ವಜನ್ಮದ ಪಾಪ ಬರುವಂತದಲ್ಲ, ಈ ರೀತಿಯ ಮೂಡನಂಬಿಕೆಗೆ ಒಳಗಾಗಿ ಜನಸಾಮಾನ್ಯರು ಯಾವುದೇ ತರಹದ ಅಹಿತಕರ ಘಟನೆಗಳನ್ನು ಮಾಡಿಕೊಳ್ಳದಿರಲು ಜನಸಾಮಾನ್ಯರಿಗೆ ತಿಳಿಸಿ ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು. ಮಾನಸಿಕ ಕಾಯಿಲೆಗೆ ಚಿಕಿತ್ಸೆ ಇದ್ದು ಮನೋವೈದ್ಯರ ಬಳಿ ಬಂದು ಚಿಕಿತ್ಸೆ ಪಡೆಯಲು ಸಲಹೆ ನೀಡಿದರು.

ಹಿರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಉಮಾಪತಿ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ರವಿಕುಮಾರ್ ಆಶಾ ಮೇಲ್ವಿಚಾರಕರಾದ ಸುರೇಖಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಶಿಯಲ್ ವರ್ಕರ್ ಸಂತೋ ಷ ಕುಮಾರ್ ಎಂ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ