Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು


ಬಳ್ಳಾರಿ,ಜು.18



ಪ್ರಸ್ತಕ ಸಾಲಿನಲ್ಲಿ ಮುಂಗಾರು-ಹಂಗಾಮಿನಲ್ಲಿ ಮಳೆ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಯುಕ್ತ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅವರು ಸೂಚನೆ ನೀಡಿದ್ದಾರೆ.

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

*ವೇಳಾಪಟ್ಟಿ:*

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಜು.19 ರಿಂದ ಸರಾಸರಿ 4100 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ಜು.19 ರಿಂದ ಆ.03 ರಿಂದ ಸರಾಸರಿ 25 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು..

ತುಂಗಭದ್ರಾ ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆ: ಜು.19 ರಿಂದ ಸರಾಸರಿ 650 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ: ಜು.22 ರಿಂದ ಸರಾಸರಿ 1300 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.

ರಾಯಬಸವಣ್ಣ ಕಾಲುವೆ: ಈಗಾಗಲೇ ಜು.01 ರಿಂದ 180 ಕ್ಯೂಸೆಕ್ಸ್ನಂತೆ ಹರಿಬಿಡಲಾಗುತ್ತಿದೆ.

ನದಿ ಪೂರಕ: ಸುಮಾರು 1000 ಕ್ಯೂಸೆಕ್ಸ್ ಮತ್ತು ಕಾರ್ಖಾನೆಗಳಿಗೆ 60 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು.

*ರೈತ ಭಾಂದವರಲ್ಲಿ ಮನವಿ:*

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.

ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

--------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ