Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ಮಡಿಕೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಪಡಾವೋ-ಬೇಟಿ ಬಚಾವೋ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ’ ತಡೆ ದಿನಾಚರಣೆ ಕಾರ್ಯಕ್ರಮವು ಶುಕ್ರವಾರ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆ ಎಂಬುವುದು ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಸಾಮಾನ್ಯಯುತವಾಗಿ ಜೀವನ ನಡೆಸಲು ಸಮಸ್ಯೆಯಾಗುತ್ತಿದ್ದು, ಮಹಿಳೆಯರನ್ನು ಕಳ್ಳ ಸಾಗಾಣಿಕೆಯಿಂದ ಅವರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದು ಅವರಿಗೆ ನೆರವು ನೀಡುವುದು, ಉತ್ತಮ ಸೌಲಭ್ಯವನ್ನು ಕಲ್ಪಿಸುವುದಾಗಿದೆ. ಶಿಕ್ಷಣದಿಂದ ವಂಚಿತರಾಗದಂತೆ ಕಾಪಾಡುವುದು, ವಿಶ್ವವೇ ಒಂದು ಕುಟುಂಬವಾಗಿರುವಾಗ ಶ್ರೀ ಕೃಷ್ಣ ಪರಮಾತ್ಮನಾ ಘೋಷವಾಕ್ಯದಂತೆ “ವಸುಧೈವಕ ಕುಟುಂಬಕಂ” ಎಂಬಂತೆ ಪ್ರತಿಯೊಬ್ಬರು ಪರಸ್ಪರ ಸಹಕಾರ ಮನೋ ಬಾಳ್ವೆಯಿಂದ ಒಳಿತನ್ನು ಬಯಸುತ್ತಾ ಬದುಕು ನಡೆಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್ ಅವರು ‘ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡುವುದು” ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುವುದು, ಅಥವಾ ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತದ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಬಿಕ್ಷಾಟಣೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಿಡುವಂತದ್ದು, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡಿ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡಲಾಗುತ್ತಿದೆ ಎಂದು ತಿಳಿಸಿದರು.

ನೆರೆದಿರುವ ಎಲ್ಲರಿಂದಲೂ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತ ಪ್ರತಿಜ್ಞಾ ವಿಧಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್ ಅವರು ಬೋಧಿಸಿದರು. ಹೇಳಿದರು.

ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಜಾಗೃತರಾಗಬೇಕು ಎಂದರು. ಇಂದು ಬಾಲ ಕಾರ್ಮಿಕ ಪದ್ಧ್ದತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿದ್ದು. ಸಾರ್ವಜನಿಕರು ಈ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಕಿರಣ್, ಕಾರ್ಮಿಕ ಮಂಡಳಿಯ ಎಕ್ಸಿಕ್ಯೂಟಿವ್ ಪ್ರಸನ್ನ ಅವರು ಹಾಜರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿದರು, ಕೇಶಿನಿ ಎಸ್.ಆರ್ ಪ್ರಾರ್ಥಸಿದರು ಹಾಗೂ ಸ್ವಾಗತಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು