Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಸಿರುಗುಪ್ಪ31 ತಂಬಾಕು ಸೇವನೆಯಿಂದ ದೇಹದ ಮೇಲೆ ಅನೇಕ ದುಷ್ಪರಿಣಾಮಗಳು ಬೀರಲಿದ್ದು, ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸ್ರ್, ಹೃದಯಾಘಾತ ಮುಂತಾದ ರೋಗಗಳು ಹರಡುತ್ತವೆ, ಇದರಿಂದ ತಂಬಾಕು ಸೇವನೆ ಮಾಡುವವರು ನುರಿತ ತಜ್ಞರಿಂದ ಸಲಹೆ ಪಡೆದು ತಂಬಾಕು ಸೇವನೆಯನ್ನು ಅತಿ ಶೀಘ್ರವಾಗಿ ಬಿಡಬೇಕೆಂದು ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಕರೆನೀಡಿದರು.
ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚೆಗೆ ತಂಬಾಕು ಸೇವನೆಯು ಸಮಾಜದಲ್ಲಿ ಹೆಮ್ಮರವಾಗಿ ಬೆಳೆದು ನಿಂತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬoತೆ ಈಗಿನ ಮಕ್ಕಳಿಗೆ ಶಾಲಾ ಪಾಠದೊಂದಿಗೆ ಸಮಾಜದಲ್ಲಿ ಅನುಸರಿಸಬೇಕಾದ ನೈತಿಕ ಪಾಠದ ಅಗತ್ಯವಿದೆ.
ಸಾರ್ವಜನಿಕ ಸ್ಥಳಗಳಾದ ಬಸ್‌ನಿಲ್ದಾಣ, ಚಿತ್ರಮಂದಿರ, ಆಸ್ಪತ್ರೆ, ಸರ್ಕಾರಿ ಕಚೇರಿಗಳು, ವಿದ್ಯಾಲಯಗಳು ಇನ್ನಿತರ ಕಡೆಗಳಲ್ಲಿ ಯಾರಾದರೂ ದೂಮಪಾನ ಹಾಗೂ ತಂಬಾಕು ಸೇವನೆ ಮಾಡುವುದನ್ನು ಕಂಡುಬAದಲ್ಲಿ ಒಗ್ಗಟ್ಟಿನಿಂದ ವಿರೋಧಿಸಬೇಕೆಂದು ತಿಳಿಸಿದರು.
ಹಿರಿಯ ವಕೀಲರಾದ ಎನ್.ಅಬ್ದುಲ್‌ಸಾಬ್, ಮಲ್ಲಿಗೌಡ, ಟ.ಹೆಚ್.ಒ. ಡಾ.ಈರಣ್ಣ ಮಾತನಾಡಿದರು. ವಕೀಲರ ಸಂಘದ ತಾ.ಅಧ್ಯಕ್ಷ ಎಸ್.ಮಂಜನಾಥಗೌಡ, ಕಾರ್ಯದರ್ಶಿ ಎಚ್.ಪ್ಯಾಟೆಗೌಡ, ವಕೀಲರಾದ ಟಿ.ವೆಂಕಟೇಶ ನಾಯ್ಕ್, ದೊಡ್ಡನಗೌಡ, ಬಾಬುಖಾನ್, ನೆಲಗುಂಟಯ್ಯ, ಜಗದೀಶಸ್ವಾಮಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ